Home / ಕವನ / ಕವಿತೆ / ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ನಾಡಿಗೆ
ಅಲ್ಲಿ ಏನೆಲ್ಲ ಇದೆಯಂತೆ
ಅದೊಂದು ಮಾಯಾ ಪೆಟ್ಟಿಗೆಯಂತೆ
ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ
ಸುಮ್ಮನೆ ಕನಸು ಕಾಣಬಾರದಂತೆ;
ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ
ವಿಚಿತ್ರವಲ್ಲದೇ ಮತ್ತಿನ್ನೇನು-

ಕಣ್ಣಿಗೆ ಎಣ್ಣೆ ಹಾಕಿಕೊಂಡೇ ಕಿಟಕಿಯ ಪಕ್ಕ ಕುಳಿತಿದ್ದೇನೆ.
ಅಕ್ಕಪಕ್ಕ-ಮುಂದಿನ-ಹಿಂದಿನ ಸೀಟುಗಳಲ್ಲೆಲ್ಲಾ
ಘಾಟಿಯೋ, ಹುಳಿಯೊಗರಿನ ಎಣ್ಣೆಯ ವಾಸನೆ.
ಅವರೂ ಚುರುಕಾಗಿರಬೇಕೆಂದೇ ತಾನೆ!
ಕುಬೇರನರಮನೆಗೆ ಹೋಗಲು
ಕಣ್ತುಂಬ ಮನತುಂಬ ಲೂಟಿ ಮಾಡಲು-

ಮೋಡಗಳು ಅದೇಕೋ ಹಿಂದೆ ಹಿಂದೆಯೇ ಉಳಿದವು.
ಸಮುದ್ರ ತೆರೆಗಳಿಗೆ ನಗುವಿಲ್ಲ, ಬಾಯಿಗೆ ಬೀಗ ಹಾಕಿಕೊಂಡವೋ
ಅವುಗಳೊಂದಿಗೆ ಮಾತನಾಡುತ್ತಿದ್ದೆನಲ್ಲಾ!!!
ಕುಬೇರನ ವಿಲಾಸಿ ಬುದಕ ನೋಡ ಹೊರಟಿರುವೆನೆಂದು
ಯಾಕೋ ಮುಖ ಕವುಚಿಕೊಂಡು
ಕೇಳಿಯೂ ಕೇಳಿಸದಂತೆ ಮೆಳ್ಳಗಣ್ಣಲ್ಲಿ
ಮೈಯೊಡಮೂರಿ ಆಚೆ ಹೊರಳಿದವು.

ವೈನ್ ಸುರಿವ ಸುಂದರಿ ಕಿಲಕಿಲಸಿ
‘ಮೊದಲ ಸಲ ಅಮೇರಿಕಾ ಪ್ರವಾಸವೆ?
ಸುರಿಯಲೇ ಮಾಯಾನಗರಿಯ ರಹಸ್ಯ.’
ಆರಡಿ ಹೆಣ್ಣಿನ ಮೂರು ಮಾತುಗಳು
ಹಸಿರು ಕಣ್ಣಿನ ಬೆಕ್ಕಿನ ನೋಟ
ಕಿವಿಯವರೆಗಿನ ಬಾಯಗಲ ನಗು
ಕುಬೇರನರಮನೆಯ ಸ್ವಾಗತ ಕಾರಿಣಿಯ
ಬೆಡಗಿಗೆ ಮೊದಲ ಹಂತದಲ್ಲೇ ಬೆಚ್ಚಿ ಬಿದ್ದೆ.

ಕುತೂಹಲದ ಮೂಟೆಯ ನನ್ನ ಮುಖ
ಹಳಬನೊಬ್ಬ ಕುಬೇರನರಮನೆಯ ಹೊಕ್ಕು
ಚಿತ್ರ ವಿಚಿತ್ರ ಸೆಳೆತದ ಭ್ರಮೆ ಸಂತೋಷಿಸಿ
ನೆಮ್ಮದಿ ಕಳೆದುಕೊಂಡದ್ದಾಗಿ,
ಶಾಂತಿಗಾಗಿ ಯೋಗಾಶ್ರಮಗಳು ಹುಡುಕುತ್ತಾ
ಊರೂರ ಅಲೆಯುತ್ತಿರುವುದಾಗಿ ಉಸಿರಾಡಿದ.
ಕಿಟಕಿಯಾಚೆ ಮೋಡಗಳ ಗಹಗಹಿಸುವಿಕೆ
ದೂರದೂರ ಕೆಳಗೆ ಸಮುದ್ರದಬ್ಬರಿಸುವಿಕೆಯ
ಶಬ್ದ ಶಬ್ದ ಶಬ್ದ
ಅದೇಕೋ ಮತ್ತೊಮ್ಮೆ ನನ್ನ ನೂಕಿ
ತೇಲಾಡಿ ಸುತ್ತಾಡಿ ಹೊರಳಾಡಿ
ಗಕ್ಕೆಂದು ಹಿಂದಿರುಗಿ ಹೊರಟೇ ಹೋದವು.

ಹಾಗಾದರೆ ಕುಬೇರನ ದೇಶ ನೋಡಲೆ?
ಅಥವಾ ನಾಳೆ ಬೆಳಗಾಗುವುದರಲ್ಲೇ
ಮರು ಪ್ರಯಾಣಿಸಿ ಯೋಗಾಶ್ರಮ ಹುಡುಕಲೆ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...