ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ನಾಡಿಗೆ
ಅಲ್ಲಿ ಏನೆಲ್ಲ ಇದೆಯಂತೆ
ಅದೊಂದು ಮಾಯಾ ಪೆಟ್ಟಿಗೆಯಂತೆ
ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ
ಸುಮ್ಮನೆ ಕನಸು ಕಾಣಬಾರದಂತೆ;
ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ
ವಿಚಿತ್ರವಲ್ಲದೇ ಮತ್ತಿನ್ನೇನು-

ಕಣ್ಣಿಗೆ ಎಣ್ಣೆ ಹಾಕಿಕೊಂಡೇ ಕಿಟಕಿಯ ಪಕ್ಕ ಕುಳಿತಿದ್ದೇನೆ.
ಅಕ್ಕಪಕ್ಕ-ಮುಂದಿನ-ಹಿಂದಿನ ಸೀಟುಗಳಲ್ಲೆಲ್ಲಾ
ಘಾಟಿಯೋ, ಹುಳಿಯೊಗರಿನ ಎಣ್ಣೆಯ ವಾಸನೆ.
ಅವರೂ ಚುರುಕಾಗಿರಬೇಕೆಂದೇ ತಾನೆ!
ಕುಬೇರನರಮನೆಗೆ ಹೋಗಲು
ಕಣ್ತುಂಬ ಮನತುಂಬ ಲೂಟಿ ಮಾಡಲು-

ಮೋಡಗಳು ಅದೇಕೋ ಹಿಂದೆ ಹಿಂದೆಯೇ ಉಳಿದವು.
ಸಮುದ್ರ ತೆರೆಗಳಿಗೆ ನಗುವಿಲ್ಲ, ಬಾಯಿಗೆ ಬೀಗ ಹಾಕಿಕೊಂಡವೋ
ಅವುಗಳೊಂದಿಗೆ ಮಾತನಾಡುತ್ತಿದ್ದೆನಲ್ಲಾ!!!
ಕುಬೇರನ ವಿಲಾಸಿ ಬುದಕ ನೋಡ ಹೊರಟಿರುವೆನೆಂದು
ಯಾಕೋ ಮುಖ ಕವುಚಿಕೊಂಡು
ಕೇಳಿಯೂ ಕೇಳಿಸದಂತೆ ಮೆಳ್ಳಗಣ್ಣಲ್ಲಿ
ಮೈಯೊಡಮೂರಿ ಆಚೆ ಹೊರಳಿದವು.

ವೈನ್ ಸುರಿವ ಸುಂದರಿ ಕಿಲಕಿಲಸಿ
‘ಮೊದಲ ಸಲ ಅಮೇರಿಕಾ ಪ್ರವಾಸವೆ?
ಸುರಿಯಲೇ ಮಾಯಾನಗರಿಯ ರಹಸ್ಯ.’
ಆರಡಿ ಹೆಣ್ಣಿನ ಮೂರು ಮಾತುಗಳು
ಹಸಿರು ಕಣ್ಣಿನ ಬೆಕ್ಕಿನ ನೋಟ
ಕಿವಿಯವರೆಗಿನ ಬಾಯಗಲ ನಗು
ಕುಬೇರನರಮನೆಯ ಸ್ವಾಗತ ಕಾರಿಣಿಯ
ಬೆಡಗಿಗೆ ಮೊದಲ ಹಂತದಲ್ಲೇ ಬೆಚ್ಚಿ ಬಿದ್ದೆ.

ಕುತೂಹಲದ ಮೂಟೆಯ ನನ್ನ ಮುಖ
ಹಳಬನೊಬ್ಬ ಕುಬೇರನರಮನೆಯ ಹೊಕ್ಕು
ಚಿತ್ರ ವಿಚಿತ್ರ ಸೆಳೆತದ ಭ್ರಮೆ ಸಂತೋಷಿಸಿ
ನೆಮ್ಮದಿ ಕಳೆದುಕೊಂಡದ್ದಾಗಿ,
ಶಾಂತಿಗಾಗಿ ಯೋಗಾಶ್ರಮಗಳು ಹುಡುಕುತ್ತಾ
ಊರೂರ ಅಲೆಯುತ್ತಿರುವುದಾಗಿ ಉಸಿರಾಡಿದ.
ಕಿಟಕಿಯಾಚೆ ಮೋಡಗಳ ಗಹಗಹಿಸುವಿಕೆ
ದೂರದೂರ ಕೆಳಗೆ ಸಮುದ್ರದಬ್ಬರಿಸುವಿಕೆಯ
ಶಬ್ದ ಶಬ್ದ ಶಬ್ದ
ಅದೇಕೋ ಮತ್ತೊಮ್ಮೆ ನನ್ನ ನೂಕಿ
ತೇಲಾಡಿ ಸುತ್ತಾಡಿ ಹೊರಳಾಡಿ
ಗಕ್ಕೆಂದು ಹಿಂದಿರುಗಿ ಹೊರಟೇ ಹೋದವು.

ಹಾಗಾದರೆ ಕುಬೇರನ ದೇಶ ನೋಡಲೆ?
ಅಥವಾ ನಾಳೆ ಬೆಳಗಾಗುವುದರಲ್ಲೇ
ಮರು ಪ್ರಯಾಣಿಸಿ ಯೋಗಾಶ್ರಮ ಹುಡುಕಲೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರಮನೆ
Next post ಕಲ್ಲಂಗಡಿ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys