ಹೊರಟಿದ್ದೇನೆ ಕುಬೇರನ ದೇಶಕ್ಕೆ

ಹೊರಟಿದ್ದೇನೆ ಕುಬೇರನ ನಾಡಿಗೆ
ಅಲ್ಲಿ ಏನೆಲ್ಲ ಇದೆಯಂತೆ
ಅದೊಂದು ಮಾಯಾ ಪೆಟ್ಟಿಗೆಯಂತೆ
ಬೇಕೆಂದದ್ದೂ ಬೇಡವೆಂದದ್ದೂ ಕಾಣುತ್ತದಂತೆ
ಸುಮ್ಮನೆ ಕನಸು ಕಾಣಬಾರದಂತೆ;
ಮೈ ಮನಸುಗಳೆಲ್ಲೆಲ್ಲಾ ಕಚಗುಳಿ ಕುತೂಹಲ
ವಿಚಿತ್ರವಲ್ಲದೇ ಮತ್ತಿನ್ನೇನು-

ಕಣ್ಣಿಗೆ ಎಣ್ಣೆ ಹಾಕಿಕೊಂಡೇ ಕಿಟಕಿಯ ಪಕ್ಕ ಕುಳಿತಿದ್ದೇನೆ.
ಅಕ್ಕಪಕ್ಕ-ಮುಂದಿನ-ಹಿಂದಿನ ಸೀಟುಗಳಲ್ಲೆಲ್ಲಾ
ಘಾಟಿಯೋ, ಹುಳಿಯೊಗರಿನ ಎಣ್ಣೆಯ ವಾಸನೆ.
ಅವರೂ ಚುರುಕಾಗಿರಬೇಕೆಂದೇ ತಾನೆ!
ಕುಬೇರನರಮನೆಗೆ ಹೋಗಲು
ಕಣ್ತುಂಬ ಮನತುಂಬ ಲೂಟಿ ಮಾಡಲು-

ಮೋಡಗಳು ಅದೇಕೋ ಹಿಂದೆ ಹಿಂದೆಯೇ ಉಳಿದವು.
ಸಮುದ್ರ ತೆರೆಗಳಿಗೆ ನಗುವಿಲ್ಲ, ಬಾಯಿಗೆ ಬೀಗ ಹಾಕಿಕೊಂಡವೋ
ಅವುಗಳೊಂದಿಗೆ ಮಾತನಾಡುತ್ತಿದ್ದೆನಲ್ಲಾ!!!
ಕುಬೇರನ ವಿಲಾಸಿ ಬುದಕ ನೋಡ ಹೊರಟಿರುವೆನೆಂದು
ಯಾಕೋ ಮುಖ ಕವುಚಿಕೊಂಡು
ಕೇಳಿಯೂ ಕೇಳಿಸದಂತೆ ಮೆಳ್ಳಗಣ್ಣಲ್ಲಿ
ಮೈಯೊಡಮೂರಿ ಆಚೆ ಹೊರಳಿದವು.

ವೈನ್ ಸುರಿವ ಸುಂದರಿ ಕಿಲಕಿಲಸಿ
‘ಮೊದಲ ಸಲ ಅಮೇರಿಕಾ ಪ್ರವಾಸವೆ?
ಸುರಿಯಲೇ ಮಾಯಾನಗರಿಯ ರಹಸ್ಯ.’
ಆರಡಿ ಹೆಣ್ಣಿನ ಮೂರು ಮಾತುಗಳು
ಹಸಿರು ಕಣ್ಣಿನ ಬೆಕ್ಕಿನ ನೋಟ
ಕಿವಿಯವರೆಗಿನ ಬಾಯಗಲ ನಗು
ಕುಬೇರನರಮನೆಯ ಸ್ವಾಗತ ಕಾರಿಣಿಯ
ಬೆಡಗಿಗೆ ಮೊದಲ ಹಂತದಲ್ಲೇ ಬೆಚ್ಚಿ ಬಿದ್ದೆ.

ಕುತೂಹಲದ ಮೂಟೆಯ ನನ್ನ ಮುಖ
ಹಳಬನೊಬ್ಬ ಕುಬೇರನರಮನೆಯ ಹೊಕ್ಕು
ಚಿತ್ರ ವಿಚಿತ್ರ ಸೆಳೆತದ ಭ್ರಮೆ ಸಂತೋಷಿಸಿ
ನೆಮ್ಮದಿ ಕಳೆದುಕೊಂಡದ್ದಾಗಿ,
ಶಾಂತಿಗಾಗಿ ಯೋಗಾಶ್ರಮಗಳು ಹುಡುಕುತ್ತಾ
ಊರೂರ ಅಲೆಯುತ್ತಿರುವುದಾಗಿ ಉಸಿರಾಡಿದ.
ಕಿಟಕಿಯಾಚೆ ಮೋಡಗಳ ಗಹಗಹಿಸುವಿಕೆ
ದೂರದೂರ ಕೆಳಗೆ ಸಮುದ್ರದಬ್ಬರಿಸುವಿಕೆಯ
ಶಬ್ದ ಶಬ್ದ ಶಬ್ದ
ಅದೇಕೋ ಮತ್ತೊಮ್ಮೆ ನನ್ನ ನೂಕಿ
ತೇಲಾಡಿ ಸುತ್ತಾಡಿ ಹೊರಳಾಡಿ
ಗಕ್ಕೆಂದು ಹಿಂದಿರುಗಿ ಹೊರಟೇ ಹೋದವು.

ಹಾಗಾದರೆ ಕುಬೇರನ ದೇಶ ನೋಡಲೆ?
ಅಥವಾ ನಾಳೆ ಬೆಳಗಾಗುವುದರಲ್ಲೇ
ಮರು ಪ್ರಯಾಣಿಸಿ ಯೋಗಾಶ್ರಮ ಹುಡುಕಲೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರಮನೆ
Next post ಕಲ್ಲಂಗಡಿ

ಸಣ್ಣ ಕತೆ

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮೇಷ್ಟ್ರು ವೆಂಕಟಸುಬ್ಬಯ್ಯ

    ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…