Home / ಕವನ / ಕವಿತೆ / ಅಮರಾವತಿ

ಅಮರಾವತಿ

ಕುತೂಹಲದ ಹೃದಯ ಕಣ್ಣು ಮನಸು
ಒಮ್ಮಿಂದೊಮ್ಮೆಲೆ ಕಕ್ಕಾಬಿಕ್ಕಿ
ಲಂಡನ್ ಸಡಗರದ ಕನಸು ನನಸಾಗುವ
ಹತ್ತಿರ ಹತ್ತಿರದ ಸಮಯ
ಸಂಭ್ರಮದ ವಿದ್ಯುತ್ ಸಂಚಾರ ಒಳಗೊಳಗೇ….

ಸಖಿಯ ಉಲಿತ ಕೆಲವೇನಿಮಿಷ
ನಗರದಮೇಲೆ ಹಿಮಾಚ್ಫಾದನೆ
ಮೈನಸ್ ಸೆಲ್ಸಿಯಸ್ ಹಿತ್ರೋಗೆ ಹೆಜ್ಜೆ ಇಡಲು
ಒಂದು ಎರಡು ಮೂರು ನಾಲ್ಕು ಸುತ್ತು
ತಿರುಗುಚಕ್ರದನುಭವ
ಏರಿಳಿತ ಹೃದಯ ಬಡಿತ ಒಳಗೆಲ್ಲ ನಿಶ್ಶಬ್ಧ

ಹುಡುಕಾಟ ಹುಡುಕಾಟ ಎಲ್ಲಿದೆ ರಾಣಿಮಹಲು
ಮೋಡ ಮಿಣುಕು ತುಣುಕು ಮಿಣುಕು
ಕಣ್ಣು ಮುಚ್ಚಾಲೆಯಾಟ ಐದನೆಯ ಸುತ್ತು
ಆಕಾಶಪ್ರದಕ್ಷಣೆ ವೀಕ್ಷಣೆ
ಪೆಗ್ಗೇರಿಸಿ ಬೆಚ್ಚಗಾಗಿರುವವರ ಇನ್ನೂ ಸುಖನಿದ್ರೆ
ಕಾಫಿಹೀರಿ ಕಿಟಕಿಯಾಚೆ ನೆಟ್ಟ ದೃಷ್ಟಿ
ನಡುವೆ ಮಂಜು ಕೊರೆತ

ಮೋಡ ಭೇದಿಸಿ ಇಳಿಮುಖದ ವಿಮಾನ
ತುಂಡುತುಂಡಾಗಿ ಕೊನೆಗೊಮ್ಮೆ ಇಡಿಯಾಗಿ
ಗಕ್ಕನೆ ಕಾಣಿಸಿತೊಂದು ಅವರಾವತಿ
ಮುಸ್ಸಂಜೆ ಹೊತ್ತು ಮಿಣಿಮಿಣಿ,
ಝಗಝಗ ದೀಪ ಹರಿದಾಡುವ ಬಣ್ಣ

ರಸ್ತೆಗಳ ಉದ್ದಗಲ ಯಕ್ಷಯಕ್ಷಿಣಿಯರು
ಇನ್ನೂ ಹುಡುಕಾಟ ರಾಣಿಯ ಮಹಲು
ಮಹಲಿನೊಳಿಲ್ಲ ರಾಜನ ಸಂಗಡ ರಾಣಿ
ಇವನಬಿಟ್ಟು ಅವನಾರೋ
ಅವನಬಿಟ್ಟು ಇನ್ಯಾರೋ, ಹಾದಿಹೆಣವಾಗಿ
ಬಿದ್ದ ರಾಜಕುಮಾರಿ
ಸೂರ್ಯಮುಳುಗಿ ಕಗ್ಗತ್ತಲು
ಅರಮನೆಗೆ ಗ್ರಹಣ
ನೂರೊಂದು ಕಥೆಗಳ ನಗರ
ಗಹಗಹಿಸಿ ನಗುವ ದೀಪಗಳು
ನನ್ನೆದೆಯೊಳಕ್ಕೆ ಆಲಂಗಿಸುವ ಕುತೂಹಲ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...