ಸ್ಥಿತ್ಯಂತರ

ಮೊದಮೊದಲೆಲ್ಲ ಈ ಮೋಡಗಳೊಳಗೆ
ಬರೀ ಕಾವಿಧರಿಸಿ ಕಮಂಡಲ ಹಿಡಿದು
ಋಷಿ ಮುನಿಗಳ ಸಮೂಹವೇ ಬಂದಂತಾಗಿ
ಭೂ ಲೋಕದವರಿಗೆ ನೀರು ಸಿಂಪಡಿಸಿ
ಸತ್ತವರನು ಉಳಿಸಿ ಆಶೀರ್ವದಿಸುವವರು ಕಾಣಿಸುತ್ತಿದ್ದರು-

ನಂತರ ನಂತರ ಬುದ್ಧ, ಗಾಂಧಿ, ಹೀಗೆ ಹೀಗೆ-
ತತ್ವ ಚಿಂತನೆಗಳ ಹೊತ್ತಿಗೆಗಳ ಹಿಡಿದು
ಸಮಾಜೋದ್ಧಾರ ಮಾನವೀಯತೆಯ ಬೀಜಗಳ
ಮಂತ್ರ ಉಚ್ಚರಿಸುತ, ಎಚ್ಚರಿಸುತ
ಬರುವುದಾ ನೋಡತೊಡಗಿದೆ.

ಈಗೀಗ ಈ ಮೋಡಗಳೊಳಗೆ
ಕೋಟು, ಟೈ ಧರಿಸಿದ ಜಾಗತೀಕರಣದ ಜನ
ಕೈಯಲಿ ನೊರೆ ತುಂಬಿದ ಗ್ಲಾಸು ಹಿಡಿದು
ಹೆಣ್ಣುಗಳ ಸೊಂಟ ಬಳಸಿ ಆಯುಧಗಳ ಮಾರಾಟ ಮಾಡುತ
ನಾಟಕೀಯತೆಯ ಮೋಡಿ ಬೆರೆಸಿ
ಜಗತ್ತನ್ನೇ ಕಬಳಿಸಿ ತೀರುವೆನೆನ್ನುವ
ಹುನ್ನಾರದ ಹುಡಿ ಸಿಂಪಡಿಸುವುದ ಕಾಣುತಿರುವೆ.

ಕಮಂಡಲದ ಪವಿತ್ರ ಪ್ರೋಕ್ಷಣೆಗೂ-
ನೊರೆತುಂಬಿದ ಹಳದಿ ಗ್ಲಾಸಿಗೂ-
ಚಿಂತನೆಗಳ ಹೊತ್ತಿಗೆಗೂ-
ಮೋಡಗಳು ಒಮ್ಮೊಮ್ಮೆ ಬೆದರಿ
ಮಿಂಚು, ಗುಡುಗು, ಸಿಡಿಲುಗಳಾಗಿ ಏನೇನೋ ಮಾತನಾಡುತ್ತವೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲ
Next post ವೃಂದಗಾನ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…