Home / ಕವನ / ಕವಿತೆ / ಕ್ಷಮಿಸು ತಂದೆ

ಕ್ಷಮಿಸು ತಂದೆ

ಎಲ್ಲರೆದೆಯೊಳಗೂ ಬಿರುಕಿನ ಗೋಡೆಗಳು
ಅದೇಕೆ ಅಷ್ಟಷ್ಟು ಎತ್ತರ ಇಷ್ಟಿಷ್ಟು ಅಗಲ
ಅಷ್ಟೊಂದು ಆಳ ಕೊಳ್ಳ ಕಣಿವೆಗಳು
ಭಾವನೆಗಳ ತಳಪಾಯ ಅಭದ್ರ ಕೃತಕ- ದೇವರೆ!

ಯುಗಯುಗಾಂತರದ ತಿರುವು ಹೊರಳು
ಗಳೊಳಗೂ ಇತ್ತು ಬಿತ್ತಿ ಬೆಳೆವ
ಪ್ರೀತಿ ಪ್ರೇಮ ವಿಶ್ವಾಸಗಳ ಬೀಜ
ಅದಕೇಕಿಂದು ರಾಹು ಬಡಿದು ಮೊಳಕೆ
ಒಡೆಯದೇ ಮನಮನ ಕಾಡಿಸುತಿವೆ- ದೇವರೆ!

ದಿಕ್ಕುದಿಕ್ಕುಗಳು ಸೀಳಿ ಚಡಪಡಿಸಿ
ಸಮುದ್ರಗಳು ಭೂಕಂಪನಕೆ ಕೋಲಾಹಲಿಸಿ
ಕಾಡು ಮೇಡು ಬೆಟ್ಟಸಾಲಿನ ಮೂಕ ಜೀವಗಳ
ಮೈಸುಟ್ಟ ನೆತ್ತರವಾಸನೆ ಹರಡಿ
ಮನಸಿಗೇಕೋ ತಳಮಳ ದೇವದೇವಾ!

ರಾತ್ರಿಯ ನಿರಮ್ಮಳ ಮೌನ ಸರಿದು
ಹಗಲಾಗುವ ಹಪಹಪಿಕೆಯೊಳಗೆ ಸಂಕಟಗಳ ಸುಳಿ
ಎಲ್ಲೆಲ್ಲೂ ಹಾವು ಏಣಿಯ ಆಟ
ದಾಳಗಳು, ದಾಳಗಳು, ಪ್ರಶ್ನಾರ್ಥಕ ವಿಷವರ್ತುಲ
ಅರ್ಥಸಿಗದ ದಾರಿಯ ತುಂಬಾ ವೇದನೆ ಚಡಪಡಿಕೆ- ದೇವರೆ!

ಕಳಿಸಿರುವೆ ಈ ಜಾತ್ರೆಗೆ ಮತಿತುಂಬಿ
ಕರೆಸಿಕೊಳ್ಳುವವನೂ ನೀನೆ
ಭಕ್ತರೊಳಗೆ ನೀನು, ನಿನ್ನೊಳಗೆ ಭಕ್ತರು
ಕರುಣಿಸು ಕರುಣಾಮಯನೆ ಮತಿಗೆಟ್ಟವರ.

ಸುರಿಸು ಎಲ್ಲರೆದೆಯಂಗಳಕೆ
ಪ್ರೀತಿ ಪ್ರೇಮ ವಿಶ್ವಾಸಗಳ ಧಾರಾಕಾರ ಮಳೆ-
ನಿನ್ನದೇ ಮಕ್ಕಳು, ನಿನ್ನದೇ ಉಸಿರು, ನಿನ್ನದೇ ಹಸಿರು
ತೇಲಿಸಿಬಿಡು ಅವರವರ ಕರ್ಮಕಾಂಡ
ಬಂಜರಿಸದಿರು ಭಾವನೆಗಳ ಭೂಮಿ
ಕ್ಷಮಿಸು, ತಂದೆ, ಶರಣು ಶರಣು ನಿನ್ನ ಪಾದಕೆ.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ