Home / ಕವನ / ಕವಿತೆ / ಕ್ಷಮಿಸು ತಂದೆ

ಕ್ಷಮಿಸು ತಂದೆ

ಎಲ್ಲರೆದೆಯೊಳಗೂ ಬಿರುಕಿನ ಗೋಡೆಗಳು
ಅದೇಕೆ ಅಷ್ಟಷ್ಟು ಎತ್ತರ ಇಷ್ಟಿಷ್ಟು ಅಗಲ
ಅಷ್ಟೊಂದು ಆಳ ಕೊಳ್ಳ ಕಣಿವೆಗಳು
ಭಾವನೆಗಳ ತಳಪಾಯ ಅಭದ್ರ ಕೃತಕ- ದೇವರೆ!

ಯುಗಯುಗಾಂತರದ ತಿರುವು ಹೊರಳು
ಗಳೊಳಗೂ ಇತ್ತು ಬಿತ್ತಿ ಬೆಳೆವ
ಪ್ರೀತಿ ಪ್ರೇಮ ವಿಶ್ವಾಸಗಳ ಬೀಜ
ಅದಕೇಕಿಂದು ರಾಹು ಬಡಿದು ಮೊಳಕೆ
ಒಡೆಯದೇ ಮನಮನ ಕಾಡಿಸುತಿವೆ- ದೇವರೆ!

ದಿಕ್ಕುದಿಕ್ಕುಗಳು ಸೀಳಿ ಚಡಪಡಿಸಿ
ಸಮುದ್ರಗಳು ಭೂಕಂಪನಕೆ ಕೋಲಾಹಲಿಸಿ
ಕಾಡು ಮೇಡು ಬೆಟ್ಟಸಾಲಿನ ಮೂಕ ಜೀವಗಳ
ಮೈಸುಟ್ಟ ನೆತ್ತರವಾಸನೆ ಹರಡಿ
ಮನಸಿಗೇಕೋ ತಳಮಳ ದೇವದೇವಾ!

ರಾತ್ರಿಯ ನಿರಮ್ಮಳ ಮೌನ ಸರಿದು
ಹಗಲಾಗುವ ಹಪಹಪಿಕೆಯೊಳಗೆ ಸಂಕಟಗಳ ಸುಳಿ
ಎಲ್ಲೆಲ್ಲೂ ಹಾವು ಏಣಿಯ ಆಟ
ದಾಳಗಳು, ದಾಳಗಳು, ಪ್ರಶ್ನಾರ್ಥಕ ವಿಷವರ್ತುಲ
ಅರ್ಥಸಿಗದ ದಾರಿಯ ತುಂಬಾ ವೇದನೆ ಚಡಪಡಿಕೆ- ದೇವರೆ!

ಕಳಿಸಿರುವೆ ಈ ಜಾತ್ರೆಗೆ ಮತಿತುಂಬಿ
ಕರೆಸಿಕೊಳ್ಳುವವನೂ ನೀನೆ
ಭಕ್ತರೊಳಗೆ ನೀನು, ನಿನ್ನೊಳಗೆ ಭಕ್ತರು
ಕರುಣಿಸು ಕರುಣಾಮಯನೆ ಮತಿಗೆಟ್ಟವರ.

ಸುರಿಸು ಎಲ್ಲರೆದೆಯಂಗಳಕೆ
ಪ್ರೀತಿ ಪ್ರೇಮ ವಿಶ್ವಾಸಗಳ ಧಾರಾಕಾರ ಮಳೆ-
ನಿನ್ನದೇ ಮಕ್ಕಳು, ನಿನ್ನದೇ ಉಸಿರು, ನಿನ್ನದೇ ಹಸಿರು
ತೇಲಿಸಿಬಿಡು ಅವರವರ ಕರ್ಮಕಾಂಡ
ಬಂಜರಿಸದಿರು ಭಾವನೆಗಳ ಭೂಮಿ
ಕ್ಷಮಿಸು, ತಂದೆ, ಶರಣು ಶರಣು ನಿನ್ನ ಪಾದಕೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...