Home / ಕವನ / ಕವಿತೆ / ಆಲ್ಪ್ಸ್‌ ಪರ್ವತ ಶ್ರೇಣಿ ಮತ್ತು ಜಿನೇವಾ ಸರೋವರ

ಆಲ್ಪ್ಸ್‌ ಪರ್ವತ ಶ್ರೇಣಿ ಮತ್ತು ಜಿನೇವಾ ಸರೋವರ

ಸ್ವಿಸ್ (Switzerland)ಗೇ
ಬಿಗಿ ಬೆಂಗಾವಲಾಗಿರುವ
‘ಆಲ್ಪ್ಸ್’ ಪರ್ವತ ಶ್ರೇಣಿಗಳು
ಆಕಾಶದ ಏಕಾಂತದೊಳಗೆ
ತನ್ನ ಹಿಮದೊಡಲು ಹರವಿಕೊಂಡು
ಪಿಸು ಮಾತಾಡುತ್ತ ಮುತ್ತಿಸುತ್ತಿದೆ.
ಮುತ್ತಿನ ಜೇನು ರಸ ತುಂಬಿಕೊಳ್ಳುತ್ತಿರುವ
‘ಜಿನೇವಾ ಸರೋವರ’
ಬಿಸಿಲು ಕಣ್ಣು ಮುಚ್ಚಾಲೆಯಲಿ
ಫಳ ಫಳ ಹೊಳೆಯುವ ತನ್ನ
ಸ್ಫಟಿಕ ಹಿಮ
ಪಾತವಾಗದಂತೆ
ಸೂರ್ಯನಿಗೆ ಆಹುತಿಯಾಗದಂತೆ
ಒಂದಕ್ಕಿಂತ ಒಂದು ಶ್ರೇಣಿಗಳು
ರಮಣೀಯ ಕಣ್ಣುಮುಚ್ಚಾಲೆಯಾಡಿ
ಮರೆಸುವಂತಿದ್ದರೂ….
ಕೊನೆಗೆ ದಣಿದ ದೇಹ
ಆಯತಪ್ಪಿ ಗಿರಕಿ ಹೊಡೆಯುತ್ತ
ಕೊಳ್ಳಗಳೊಳಗೆ ಜಾರುತ್ತ
ತನ್ನ ಬಿಸಿ ಉಸಿರಿನಲ್ಲಿ
ತಾನೇ ಕರಗಿ
ಸದ್ದಿಲ್ಲದೆ ಸರೋವರ ಸೇರಿ
ನೀಲಕಾಂತೆಯಾಗಿ ವಿಶ್ರಮಿಸುವುದು.
(‘ಜಿನೇವಾ’ ಮಾರ್ಗವಾಗಿ ‘ರೋಮ್’ಗೆ ಹೊರಟಾಗ ವಿಮಾನದಿಂದ ಕಾಣಿಸುವ ಆಲ್ಫ್ಸ್‌ ಪರ್ವತಶ್ರೇಣಿಗಳು ಮತ್ತು ಜಿನೇವಾ ಸರೋವರದ ದೃಶ್ಯ ಮನಮೋಹಕವಾದುದು.)
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...