Home / ಕವನ / ಕವಿತೆ / ಪೆರ್ರೂಗೀ ಮತ್ತು ಮೋನಲಿಸಾ

ಪೆರ್ರೂಗೀ ಮತ್ತು ಮೋನಲಿಸಾ

ನನ್ನ ನಂಬು ಮೋನಾಲಿಸಾ
ನಾನು ಹಗಲು ಗಳ್ಳನೂ ಆಲ್ಲ ತಲೆಹಿಡುಕನೂ ಅಲ್ಲ
ಪೊಳ್ಳು ಭ್ರಮೆ ಎಂದರೂ ಅನ್ನಲಿ
ಈ ಜನ ಈ ನ್ಯಾಯಾಲಯ
ನೀನು ನನ್ನವಳೇ.
ಮರೆಯಲಾದೀತೆ ನಾನೂರು ವರ್ಷಗಳ
ಹಿಂದಿನ ನಮ್ಮ ಸಂಸಾರ?
ಹೇಗೆ ಹೇಳಲಿ ಇವರಿಗೆ
ಸಧೃಢ ದೇಹ ಮುಗುಳ್ನಗೆ
ಹೊಳಪು ಕಣ್ಣುಗಳ ನೀನು
ಹೊರಬಿದ್ದಾಗೆಲ್ಲ ನಾನದೆಷ್ಟು ಅಸೂಯೆ ಪಡುತ್ತಿದ್ದೆ ಗೊತ್ತೇ
ಲಿರ್ಯೊನಾರ್ಡ್ ಡಾ ವಿಂಚಿ ಕುಂಚಕ್ಕೆ
ನೀ ರೂಪದರ್ಶಿ ಯಾದಾಗ ನಾನು
ಚಡಪಡಿಸಿದ್ದೇನು ನಿನ್ನ ಕೆನ್ನಗೆ ಬಾರಿಸಿದ್ದೇನು
ಪೂನರ್ಜನ್ಮ ಇಲ್ಲದಿದ್ದರೆ
ಮತ್ತೆ ಹುಟ್ಟಿ ನಿನ್ನನ್ನು ನೆನಪಿಸಿಕೊಳ್ಳುವ
ಪ್ರಮೇಯವೇ ಇರುತ್ತಿರಲಿಲ್ಲವೇನೋ
ನಾನು ಮತ್ತೆ ಹುಟ್ಟಿದ್ದೇನೆ
ತೈಲ ಚಿತ್ರದ ನೀನು
ಮತ್ತೆ ಮತ್ತೆ ನನ್ನನ್ನು ಕಾಡುತ್ತಿರುವಿ
ಪ್ಯಾರಿಸ್ಸಿನ ಸುತ್ತಲ್ಲ ಹರಿದಾಡಿದ
ಸೈನ್ ನದಿಯಂತೆ ಕೆಂಪು ಹಸಿರು
ಮಿಶ್ರಿತ ಪ್ಲುಟೋಯ್ ಗಿಡಗಳಂತೆ.
ಲೂವೃ ಮ್ಯೂಸಿಯಂ
ಬಂಧಿಖಾನೆಯಲ್ಲೇಕಿರಬೇಕು ನೀನು
ಎಂದೇ ಭದ್ರತಾ ಪಡೆಯನ್ನೇ ಭೇದಿಸಿ
ನಿನ್ನ ಹೊರಕರೆದುಕೊಂಡು ಬಂದೆ
ಊರೂರು ಸುತ್ತಿದೆ.

“ನಿನ್ನ ಮುಗಳ್ನಗೆಯಿಂದ
ಪ್ಯಾರಿಸ್ಸಿನ ಮುಸ್ಸಂಜೆಗಳಿಗೆ ರಂಗೇರುತ್ತಿತ್ತು
‘ಶಾಂಪೇನ್’ ಬಾಟಲ್‌ಗಳು ಖಾಲಿಯಾಗುತ್ತಿದ್ದವು’
ಮೋನಾಲಿಸಾ ನೀನೂ ಲೂವೃದ ಮಹಾರಾಣಿ
ಜಗತ್ತಿನ ರಾಜಕುಮಾರಿ
ನನ್ನ ಗುಡಿಸಲಲ್ಲೇನು
ನಿನ್ನ ನಗು ಹೊಳಪು ಕಣ್ಣು ಕಂದಿಡುತ್ತಿದೆಯಲ್ಲ
ರೂಪರಾಶಿ ರೂಪಸಿ
ಇದೆಂತಹ ವಿರಹವೇದನೆ ನನಗೆ
ಚಿತ್ರ ಹರಿದು ಸುಡಲೂ ಮನಸ್ಸು ಬರುತ್ತಿಲ್ಲ
ನೀನು ನನ್ನವಳು.
ಪೋಲೀಸ ವಶಕ್ಕೆ ನಾನು ಸೇರಿದ್ದೇನು ಮಹಾ ಬಿಡು
ನನ್ನಿಂದ ಅವರು ಕಿತ್ತುಕೊಂಡರಲ್ಲ ನಿನ್ನ
ನ್ಯಾಯಾಲಯ ಹುಚ್ಚ ಮನೋರೋಗಿ ಎಂದಿತೇನೋ
ನಿಜವಾಗಿಯೂ ನಾನೇನೂ ಅಲ್ಲ
ಪುನರ್ಜನ್ಮದಲ್ಲಿ ನಂಬಿಕೆ ಇರುವವನು ಮಾತ್ರ.
ಜೈಲಿನಿಂದ ಹೊರಬಿದ್ದು ಎಷ್ಟೋ ವರ್ಷಗಳಾದವು
ಈಗ ನೂರರ ಮುದುಕ
ಲುವೃದ ಎದುರಿನ ಸೈನ್ ನದಿಯ
ದಡದಲ್ಲೇ ಕುಳಿತು
ಹದಿಹರೆಯರ ಮುಗುಳ್ನಗೆಯಲಿ
ನಿನ್ನ ಕಾಣುತ್ತ ಬೆಚ್ಚಗಾಗುತ್ತಿದ್ದೇನೆ ಲೀಸಾ
ಮತ್ತೆ ಮತ್ತೆ ಅವರಲ್ಲಿ
ನೀ ಹುಟ್ಟಿ ಬರುತ್ತಲೇ ಇರುವಿಯೆಂದು.

(ಪ್ಯಾರಿಸ್ಸಿನ ಲೂವೃ ಮ್ಯೂಸಿಯಂದಲ್ಲಿ ಮೋನಾಲಿಸಾ ಚಿತ್ರ ನೋಡಿದಾಗ – ೧೫೦೬ರಲ್ಲಿ ಲಿರ್ಯೊನಾರ್ಡ್‌ ಡಾ ವಿಂಚಿ ಮೋನಾಲಿಸಾ ತೈಲ ಚಿತ್ರ ತೆಗೆದ. ಅದು ಜಗತ್ತ್ರಸಿದ್ದವಾಯಿತು. ೧೯೧೧ ರಲ್ಲಿ ಪುನರ್ಜನ್ಮದಲ್ಲಿ ನಂಬಕೆ ಇರುವ ಪೆರೂಗೀ ಎನ್ನುವ ವ್ಯಕ್ತಿ ಈ ಚಿತ್ರ ಕಳವು ಮಾಡಿವ. ಕೊನೆಗೆ ಇವನು ಸಿಕ್ಕಿಬಿದ್ದು ವಿಚಾರಣೆ ನ್ಯಾಯಾಲಯದಲ್ಲಿ ನಡೆದಾಗ ಇವನೊಬ್ಬ ಮನೋರೋಗಿ ಎಂದು ಜೈಲಿನಿಂದ ಬಿಡುಗಡೆ ಮಾಡಿದರು. ಕಳುವಿನ ಉದ್ದೇಶ ಏನಿರಬಹುದು? ದೇಶ ವಿದೇಶದಲ್ಲಿ ಸುದ್ದಿ ಹಬ್ಬಿತ್ತು.)
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...