Home / ಕವನ / ಕವಿತೆ / ಪೆರ್ರೂಗೀ ಮತ್ತು ಮೋನಲಿಸಾ

ಪೆರ್ರೂಗೀ ಮತ್ತು ಮೋನಲಿಸಾ

ನನ್ನ ನಂಬು ಮೋನಾಲಿಸಾ
ನಾನು ಹಗಲು ಗಳ್ಳನೂ ಆಲ್ಲ ತಲೆಹಿಡುಕನೂ ಅಲ್ಲ
ಪೊಳ್ಳು ಭ್ರಮೆ ಎಂದರೂ ಅನ್ನಲಿ
ಈ ಜನ ಈ ನ್ಯಾಯಾಲಯ
ನೀನು ನನ್ನವಳೇ.
ಮರೆಯಲಾದೀತೆ ನಾನೂರು ವರ್ಷಗಳ
ಹಿಂದಿನ ನಮ್ಮ ಸಂಸಾರ?
ಹೇಗೆ ಹೇಳಲಿ ಇವರಿಗೆ
ಸಧೃಢ ದೇಹ ಮುಗುಳ್ನಗೆ
ಹೊಳಪು ಕಣ್ಣುಗಳ ನೀನು
ಹೊರಬಿದ್ದಾಗೆಲ್ಲ ನಾನದೆಷ್ಟು ಅಸೂಯೆ ಪಡುತ್ತಿದ್ದೆ ಗೊತ್ತೇ
ಲಿರ್ಯೊನಾರ್ಡ್ ಡಾ ವಿಂಚಿ ಕುಂಚಕ್ಕೆ
ನೀ ರೂಪದರ್ಶಿ ಯಾದಾಗ ನಾನು
ಚಡಪಡಿಸಿದ್ದೇನು ನಿನ್ನ ಕೆನ್ನಗೆ ಬಾರಿಸಿದ್ದೇನು
ಪೂನರ್ಜನ್ಮ ಇಲ್ಲದಿದ್ದರೆ
ಮತ್ತೆ ಹುಟ್ಟಿ ನಿನ್ನನ್ನು ನೆನಪಿಸಿಕೊಳ್ಳುವ
ಪ್ರಮೇಯವೇ ಇರುತ್ತಿರಲಿಲ್ಲವೇನೋ
ನಾನು ಮತ್ತೆ ಹುಟ್ಟಿದ್ದೇನೆ
ತೈಲ ಚಿತ್ರದ ನೀನು
ಮತ್ತೆ ಮತ್ತೆ ನನ್ನನ್ನು ಕಾಡುತ್ತಿರುವಿ
ಪ್ಯಾರಿಸ್ಸಿನ ಸುತ್ತಲ್ಲ ಹರಿದಾಡಿದ
ಸೈನ್ ನದಿಯಂತೆ ಕೆಂಪು ಹಸಿರು
ಮಿಶ್ರಿತ ಪ್ಲುಟೋಯ್ ಗಿಡಗಳಂತೆ.
ಲೂವೃ ಮ್ಯೂಸಿಯಂ
ಬಂಧಿಖಾನೆಯಲ್ಲೇಕಿರಬೇಕು ನೀನು
ಎಂದೇ ಭದ್ರತಾ ಪಡೆಯನ್ನೇ ಭೇದಿಸಿ
ನಿನ್ನ ಹೊರಕರೆದುಕೊಂಡು ಬಂದೆ
ಊರೂರು ಸುತ್ತಿದೆ.

“ನಿನ್ನ ಮುಗಳ್ನಗೆಯಿಂದ
ಪ್ಯಾರಿಸ್ಸಿನ ಮುಸ್ಸಂಜೆಗಳಿಗೆ ರಂಗೇರುತ್ತಿತ್ತು
‘ಶಾಂಪೇನ್’ ಬಾಟಲ್‌ಗಳು ಖಾಲಿಯಾಗುತ್ತಿದ್ದವು’
ಮೋನಾಲಿಸಾ ನೀನೂ ಲೂವೃದ ಮಹಾರಾಣಿ
ಜಗತ್ತಿನ ರಾಜಕುಮಾರಿ
ನನ್ನ ಗುಡಿಸಲಲ್ಲೇನು
ನಿನ್ನ ನಗು ಹೊಳಪು ಕಣ್ಣು ಕಂದಿಡುತ್ತಿದೆಯಲ್ಲ
ರೂಪರಾಶಿ ರೂಪಸಿ
ಇದೆಂತಹ ವಿರಹವೇದನೆ ನನಗೆ
ಚಿತ್ರ ಹರಿದು ಸುಡಲೂ ಮನಸ್ಸು ಬರುತ್ತಿಲ್ಲ
ನೀನು ನನ್ನವಳು.
ಪೋಲೀಸ ವಶಕ್ಕೆ ನಾನು ಸೇರಿದ್ದೇನು ಮಹಾ ಬಿಡು
ನನ್ನಿಂದ ಅವರು ಕಿತ್ತುಕೊಂಡರಲ್ಲ ನಿನ್ನ
ನ್ಯಾಯಾಲಯ ಹುಚ್ಚ ಮನೋರೋಗಿ ಎಂದಿತೇನೋ
ನಿಜವಾಗಿಯೂ ನಾನೇನೂ ಅಲ್ಲ
ಪುನರ್ಜನ್ಮದಲ್ಲಿ ನಂಬಿಕೆ ಇರುವವನು ಮಾತ್ರ.
ಜೈಲಿನಿಂದ ಹೊರಬಿದ್ದು ಎಷ್ಟೋ ವರ್ಷಗಳಾದವು
ಈಗ ನೂರರ ಮುದುಕ
ಲುವೃದ ಎದುರಿನ ಸೈನ್ ನದಿಯ
ದಡದಲ್ಲೇ ಕುಳಿತು
ಹದಿಹರೆಯರ ಮುಗುಳ್ನಗೆಯಲಿ
ನಿನ್ನ ಕಾಣುತ್ತ ಬೆಚ್ಚಗಾಗುತ್ತಿದ್ದೇನೆ ಲೀಸಾ
ಮತ್ತೆ ಮತ್ತೆ ಅವರಲ್ಲಿ
ನೀ ಹುಟ್ಟಿ ಬರುತ್ತಲೇ ಇರುವಿಯೆಂದು.

(ಪ್ಯಾರಿಸ್ಸಿನ ಲೂವೃ ಮ್ಯೂಸಿಯಂದಲ್ಲಿ ಮೋನಾಲಿಸಾ ಚಿತ್ರ ನೋಡಿದಾಗ – ೧೫೦೬ರಲ್ಲಿ ಲಿರ್ಯೊನಾರ್ಡ್‌ ಡಾ ವಿಂಚಿ ಮೋನಾಲಿಸಾ ತೈಲ ಚಿತ್ರ ತೆಗೆದ. ಅದು ಜಗತ್ತ್ರಸಿದ್ದವಾಯಿತು. ೧೯೧೧ ರಲ್ಲಿ ಪುನರ್ಜನ್ಮದಲ್ಲಿ ನಂಬಕೆ ಇರುವ ಪೆರೂಗೀ ಎನ್ನುವ ವ್ಯಕ್ತಿ ಈ ಚಿತ್ರ ಕಳವು ಮಾಡಿವ. ಕೊನೆಗೆ ಇವನು ಸಿಕ್ಕಿಬಿದ್ದು ವಿಚಾರಣೆ ನ್ಯಾಯಾಲಯದಲ್ಲಿ ನಡೆದಾಗ ಇವನೊಬ್ಬ ಮನೋರೋಗಿ ಎಂದು ಜೈಲಿನಿಂದ ಬಿಡುಗಡೆ ಮಾಡಿದರು. ಕಳುವಿನ ಉದ್ದೇಶ ಏನಿರಬಹುದು? ದೇಶ ವಿದೇಶದಲ್ಲಿ ಸುದ್ದಿ ಹಬ್ಬಿತ್ತು.)
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...