Home / ಕವನ / ಕವಿತೆ / ಪೆರ್ರೂಗೀ ಮತ್ತು ಮೋನಲಿಸಾ

ಪೆರ್ರೂಗೀ ಮತ್ತು ಮೋನಲಿಸಾ

ನನ್ನ ನಂಬು ಮೋನಾಲಿಸಾ
ನಾನು ಹಗಲು ಗಳ್ಳನೂ ಆಲ್ಲ ತಲೆಹಿಡುಕನೂ ಅಲ್ಲ
ಪೊಳ್ಳು ಭ್ರಮೆ ಎಂದರೂ ಅನ್ನಲಿ
ಈ ಜನ ಈ ನ್ಯಾಯಾಲಯ
ನೀನು ನನ್ನವಳೇ.
ಮರೆಯಲಾದೀತೆ ನಾನೂರು ವರ್ಷಗಳ
ಹಿಂದಿನ ನಮ್ಮ ಸಂಸಾರ?
ಹೇಗೆ ಹೇಳಲಿ ಇವರಿಗೆ
ಸಧೃಢ ದೇಹ ಮುಗುಳ್ನಗೆ
ಹೊಳಪು ಕಣ್ಣುಗಳ ನೀನು
ಹೊರಬಿದ್ದಾಗೆಲ್ಲ ನಾನದೆಷ್ಟು ಅಸೂಯೆ ಪಡುತ್ತಿದ್ದೆ ಗೊತ್ತೇ
ಲಿರ್ಯೊನಾರ್ಡ್ ಡಾ ವಿಂಚಿ ಕುಂಚಕ್ಕೆ
ನೀ ರೂಪದರ್ಶಿ ಯಾದಾಗ ನಾನು
ಚಡಪಡಿಸಿದ್ದೇನು ನಿನ್ನ ಕೆನ್ನಗೆ ಬಾರಿಸಿದ್ದೇನು
ಪೂನರ್ಜನ್ಮ ಇಲ್ಲದಿದ್ದರೆ
ಮತ್ತೆ ಹುಟ್ಟಿ ನಿನ್ನನ್ನು ನೆನಪಿಸಿಕೊಳ್ಳುವ
ಪ್ರಮೇಯವೇ ಇರುತ್ತಿರಲಿಲ್ಲವೇನೋ
ನಾನು ಮತ್ತೆ ಹುಟ್ಟಿದ್ದೇನೆ
ತೈಲ ಚಿತ್ರದ ನೀನು
ಮತ್ತೆ ಮತ್ತೆ ನನ್ನನ್ನು ಕಾಡುತ್ತಿರುವಿ
ಪ್ಯಾರಿಸ್ಸಿನ ಸುತ್ತಲ್ಲ ಹರಿದಾಡಿದ
ಸೈನ್ ನದಿಯಂತೆ ಕೆಂಪು ಹಸಿರು
ಮಿಶ್ರಿತ ಪ್ಲುಟೋಯ್ ಗಿಡಗಳಂತೆ.
ಲೂವೃ ಮ್ಯೂಸಿಯಂ
ಬಂಧಿಖಾನೆಯಲ್ಲೇಕಿರಬೇಕು ನೀನು
ಎಂದೇ ಭದ್ರತಾ ಪಡೆಯನ್ನೇ ಭೇದಿಸಿ
ನಿನ್ನ ಹೊರಕರೆದುಕೊಂಡು ಬಂದೆ
ಊರೂರು ಸುತ್ತಿದೆ.

“ನಿನ್ನ ಮುಗಳ್ನಗೆಯಿಂದ
ಪ್ಯಾರಿಸ್ಸಿನ ಮುಸ್ಸಂಜೆಗಳಿಗೆ ರಂಗೇರುತ್ತಿತ್ತು
‘ಶಾಂಪೇನ್’ ಬಾಟಲ್‌ಗಳು ಖಾಲಿಯಾಗುತ್ತಿದ್ದವು’
ಮೋನಾಲಿಸಾ ನೀನೂ ಲೂವೃದ ಮಹಾರಾಣಿ
ಜಗತ್ತಿನ ರಾಜಕುಮಾರಿ
ನನ್ನ ಗುಡಿಸಲಲ್ಲೇನು
ನಿನ್ನ ನಗು ಹೊಳಪು ಕಣ್ಣು ಕಂದಿಡುತ್ತಿದೆಯಲ್ಲ
ರೂಪರಾಶಿ ರೂಪಸಿ
ಇದೆಂತಹ ವಿರಹವೇದನೆ ನನಗೆ
ಚಿತ್ರ ಹರಿದು ಸುಡಲೂ ಮನಸ್ಸು ಬರುತ್ತಿಲ್ಲ
ನೀನು ನನ್ನವಳು.
ಪೋಲೀಸ ವಶಕ್ಕೆ ನಾನು ಸೇರಿದ್ದೇನು ಮಹಾ ಬಿಡು
ನನ್ನಿಂದ ಅವರು ಕಿತ್ತುಕೊಂಡರಲ್ಲ ನಿನ್ನ
ನ್ಯಾಯಾಲಯ ಹುಚ್ಚ ಮನೋರೋಗಿ ಎಂದಿತೇನೋ
ನಿಜವಾಗಿಯೂ ನಾನೇನೂ ಅಲ್ಲ
ಪುನರ್ಜನ್ಮದಲ್ಲಿ ನಂಬಿಕೆ ಇರುವವನು ಮಾತ್ರ.
ಜೈಲಿನಿಂದ ಹೊರಬಿದ್ದು ಎಷ್ಟೋ ವರ್ಷಗಳಾದವು
ಈಗ ನೂರರ ಮುದುಕ
ಲುವೃದ ಎದುರಿನ ಸೈನ್ ನದಿಯ
ದಡದಲ್ಲೇ ಕುಳಿತು
ಹದಿಹರೆಯರ ಮುಗುಳ್ನಗೆಯಲಿ
ನಿನ್ನ ಕಾಣುತ್ತ ಬೆಚ್ಚಗಾಗುತ್ತಿದ್ದೇನೆ ಲೀಸಾ
ಮತ್ತೆ ಮತ್ತೆ ಅವರಲ್ಲಿ
ನೀ ಹುಟ್ಟಿ ಬರುತ್ತಲೇ ಇರುವಿಯೆಂದು.

(ಪ್ಯಾರಿಸ್ಸಿನ ಲೂವೃ ಮ್ಯೂಸಿಯಂದಲ್ಲಿ ಮೋನಾಲಿಸಾ ಚಿತ್ರ ನೋಡಿದಾಗ – ೧೫೦೬ರಲ್ಲಿ ಲಿರ್ಯೊನಾರ್ಡ್‌ ಡಾ ವಿಂಚಿ ಮೋನಾಲಿಸಾ ತೈಲ ಚಿತ್ರ ತೆಗೆದ. ಅದು ಜಗತ್ತ್ರಸಿದ್ದವಾಯಿತು. ೧೯೧೧ ರಲ್ಲಿ ಪುನರ್ಜನ್ಮದಲ್ಲಿ ನಂಬಕೆ ಇರುವ ಪೆರೂಗೀ ಎನ್ನುವ ವ್ಯಕ್ತಿ ಈ ಚಿತ್ರ ಕಳವು ಮಾಡಿವ. ಕೊನೆಗೆ ಇವನು ಸಿಕ್ಕಿಬಿದ್ದು ವಿಚಾರಣೆ ನ್ಯಾಯಾಲಯದಲ್ಲಿ ನಡೆದಾಗ ಇವನೊಬ್ಬ ಮನೋರೋಗಿ ಎಂದು ಜೈಲಿನಿಂದ ಬಿಡುಗಡೆ ಮಾಡಿದರು. ಕಳುವಿನ ಉದ್ದೇಶ ಏನಿರಬಹುದು? ದೇಶ ವಿದೇಶದಲ್ಲಿ ಸುದ್ದಿ ಹಬ್ಬಿತ್ತು.)
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...