Home / ಕವನ / ಕವಿತೆ / ಹುಟ್ಟು

ಹುಟ್ಟು

ಎಲ್ಲೋ ಬೆಳೆದ ಗಿಡಮರಗಳ
ಒಣ ತರಗಲೆಗಳ ಸವರಿ ಗಾಳಿ,
ತೇಲಿ ಬಿಟ್ಟ ಕಣಜ ಬದುವಿನ ಕಾಳು,
ಹೋಗಿದ್ದಾರೆ ಮೋಡಗಳ ಕರೆತರಲು
ಕೈಯೊಂದು ಬೇಕಿದೆ ಹನಿಗಳ ಸಿಂಪಡಿಸಲು
ಎಟುಕು ಮೊಳಕೆಗೆ ಕಾದು ಕುಳಿತ ಮರ್ಮರ.

ಯಾರಿಗೆ ಗೊತ್ತು ಕಾವು ಕೊಡುವ ಖಾತ್ರಿ
ಬಹಳ ದೂರದಲ್ಲಿನ ನಕ್ಷತ್ರಗಳು ಮಿಣುಕಿ
ಕಣ್ಣ ಎವೆ ತೆರೆಯುವುದರೊಳಗೆ ಬೇರಿಗಿಳಿದ
ಜೀವ ಫಸಲು ಆಗಲು ಹಾತೊರೆದ ಕ್ಷಣ
ಕತ್ತಲ ಸಾಗರದಲಿ ತೇಲಿಸಿದ ಭರವಸೆಗಳು.
ಹನಿ ಇಬ್ಬನಿ ಹರಿದ ಸಾಲು ಉಸಿರು ಬಸಿರು.

ಎಲ್ಲೋ ಬೆಸೆದ ಮೋಡಗಳ ನಡುವೆ
ರಾತ್ರಿಗಳ ಚಿಕ್ಕಿಗಳು ಬೆರೆತು ತೂಕಡಿಸಿ,
ಹಕ್ಕಿ ಪಕ್ಷಿಗಳು ಎದೆಗೆ ಅಮರಿಕೊಂಡ ಪ್ರೀತಿ,
ಸಾಲು ಸಾಲು ಕಿರಣಗಳ ಸ್ಪರ್ಶಕೆ ಮೈ ದಡವಿ
ಅರಳೀ ಘಮ್ಮೆಂದು ಹೂವಗಂಧ
ಗಾಳಿ ಕಾಳು ನಕ್ಷತ್ರ ಇಬ್ಬನಿ ಮಿನುಗಿದ ಧರೆ.

ಮಳೆ ಗಾಳಿ ಮೋಡ ಉಡಿ ತುಂಬಿದ ಮಾಯೆ
ಜಗಕೆ ಅರಳಲು ಹೇಳಿ ಸ್ಪರ್ಶಕೆ ಮರುಳಾದಳು
ರೂಪ ರಸಗಂಧ ಆನಂದ ಲೋಕ ಕಣ್ಣುಗಳ,
ಹಿಗ್ಗಿದ ಸುಗ್ಗೀ ಕುಣಿತದಲಿ ಬೆಳಕಾಡಿಸಿ,
ಒಡಲ ಹರಿದು ಹರಿಸಿ ಚೆಂದ,
ಆಟವಾಡಿದಳು ಸಿರಿಗಂಧಿ ಎಂದಿಗೂ ಅಮರ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...