Home / ಕವನ / ಕವಿತೆ / ಹುಟ್ಟು

ಹುಟ್ಟು

ಎಲ್ಲೋ ಬೆಳೆದ ಗಿಡಮರಗಳ
ಒಣ ತರಗಲೆಗಳ ಸವರಿ ಗಾಳಿ,
ತೇಲಿ ಬಿಟ್ಟ ಕಣಜ ಬದುವಿನ ಕಾಳು,
ಹೋಗಿದ್ದಾರೆ ಮೋಡಗಳ ಕರೆತರಲು
ಕೈಯೊಂದು ಬೇಕಿದೆ ಹನಿಗಳ ಸಿಂಪಡಿಸಲು
ಎಟುಕು ಮೊಳಕೆಗೆ ಕಾದು ಕುಳಿತ ಮರ್ಮರ.

ಯಾರಿಗೆ ಗೊತ್ತು ಕಾವು ಕೊಡುವ ಖಾತ್ರಿ
ಬಹಳ ದೂರದಲ್ಲಿನ ನಕ್ಷತ್ರಗಳು ಮಿಣುಕಿ
ಕಣ್ಣ ಎವೆ ತೆರೆಯುವುದರೊಳಗೆ ಬೇರಿಗಿಳಿದ
ಜೀವ ಫಸಲು ಆಗಲು ಹಾತೊರೆದ ಕ್ಷಣ
ಕತ್ತಲ ಸಾಗರದಲಿ ತೇಲಿಸಿದ ಭರವಸೆಗಳು.
ಹನಿ ಇಬ್ಬನಿ ಹರಿದ ಸಾಲು ಉಸಿರು ಬಸಿರು.

ಎಲ್ಲೋ ಬೆಸೆದ ಮೋಡಗಳ ನಡುವೆ
ರಾತ್ರಿಗಳ ಚಿಕ್ಕಿಗಳು ಬೆರೆತು ತೂಕಡಿಸಿ,
ಹಕ್ಕಿ ಪಕ್ಷಿಗಳು ಎದೆಗೆ ಅಮರಿಕೊಂಡ ಪ್ರೀತಿ,
ಸಾಲು ಸಾಲು ಕಿರಣಗಳ ಸ್ಪರ್ಶಕೆ ಮೈ ದಡವಿ
ಅರಳೀ ಘಮ್ಮೆಂದು ಹೂವಗಂಧ
ಗಾಳಿ ಕಾಳು ನಕ್ಷತ್ರ ಇಬ್ಬನಿ ಮಿನುಗಿದ ಧರೆ.

ಮಳೆ ಗಾಳಿ ಮೋಡ ಉಡಿ ತುಂಬಿದ ಮಾಯೆ
ಜಗಕೆ ಅರಳಲು ಹೇಳಿ ಸ್ಪರ್ಶಕೆ ಮರುಳಾದಳು
ರೂಪ ರಸಗಂಧ ಆನಂದ ಲೋಕ ಕಣ್ಣುಗಳ,
ಹಿಗ್ಗಿದ ಸುಗ್ಗೀ ಕುಣಿತದಲಿ ಬೆಳಕಾಡಿಸಿ,
ಒಡಲ ಹರಿದು ಹರಿಸಿ ಚೆಂದ,
ಆಟವಾಡಿದಳು ಸಿರಿಗಂಧಿ ಎಂದಿಗೂ ಅಮರ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...