Home / ಕವನ / ಕವಿತೆ / ಹುಟ್ಟು

ಹುಟ್ಟು

ಎಲ್ಲೋ ಬೆಳೆದ ಗಿಡಮರಗಳ
ಒಣ ತರಗಲೆಗಳ ಸವರಿ ಗಾಳಿ,
ತೇಲಿ ಬಿಟ್ಟ ಕಣಜ ಬದುವಿನ ಕಾಳು,
ಹೋಗಿದ್ದಾರೆ ಮೋಡಗಳ ಕರೆತರಲು
ಕೈಯೊಂದು ಬೇಕಿದೆ ಹನಿಗಳ ಸಿಂಪಡಿಸಲು
ಎಟುಕು ಮೊಳಕೆಗೆ ಕಾದು ಕುಳಿತ ಮರ್ಮರ.

ಯಾರಿಗೆ ಗೊತ್ತು ಕಾವು ಕೊಡುವ ಖಾತ್ರಿ
ಬಹಳ ದೂರದಲ್ಲಿನ ನಕ್ಷತ್ರಗಳು ಮಿಣುಕಿ
ಕಣ್ಣ ಎವೆ ತೆರೆಯುವುದರೊಳಗೆ ಬೇರಿಗಿಳಿದ
ಜೀವ ಫಸಲು ಆಗಲು ಹಾತೊರೆದ ಕ್ಷಣ
ಕತ್ತಲ ಸಾಗರದಲಿ ತೇಲಿಸಿದ ಭರವಸೆಗಳು.
ಹನಿ ಇಬ್ಬನಿ ಹರಿದ ಸಾಲು ಉಸಿರು ಬಸಿರು.

ಎಲ್ಲೋ ಬೆಸೆದ ಮೋಡಗಳ ನಡುವೆ
ರಾತ್ರಿಗಳ ಚಿಕ್ಕಿಗಳು ಬೆರೆತು ತೂಕಡಿಸಿ,
ಹಕ್ಕಿ ಪಕ್ಷಿಗಳು ಎದೆಗೆ ಅಮರಿಕೊಂಡ ಪ್ರೀತಿ,
ಸಾಲು ಸಾಲು ಕಿರಣಗಳ ಸ್ಪರ್ಶಕೆ ಮೈ ದಡವಿ
ಅರಳೀ ಘಮ್ಮೆಂದು ಹೂವಗಂಧ
ಗಾಳಿ ಕಾಳು ನಕ್ಷತ್ರ ಇಬ್ಬನಿ ಮಿನುಗಿದ ಧರೆ.

ಮಳೆ ಗಾಳಿ ಮೋಡ ಉಡಿ ತುಂಬಿದ ಮಾಯೆ
ಜಗಕೆ ಅರಳಲು ಹೇಳಿ ಸ್ಪರ್ಶಕೆ ಮರುಳಾದಳು
ರೂಪ ರಸಗಂಧ ಆನಂದ ಲೋಕ ಕಣ್ಣುಗಳ,
ಹಿಗ್ಗಿದ ಸುಗ್ಗೀ ಕುಣಿತದಲಿ ಬೆಳಕಾಡಿಸಿ,
ಒಡಲ ಹರಿದು ಹರಿಸಿ ಚೆಂದ,
ಆಟವಾಡಿದಳು ಸಿರಿಗಂಧಿ ಎಂದಿಗೂ ಅಮರ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...