Home / ಕವನ / ಕವಿತೆ / ಅವ್ವ

ಅವ್ವ

ರೊಟ್ಟಿ ತಟ್ಟೀ ತಟ್ಟೀ ಅವ್ವನ
ಕೈಯ ರೇಖೆಗಳು ಕರಗಿ
ಚಿಕ್ಕೀ ಬಳೆಗಳು ಮಾಸಿವೆ
ಒಲೆಯ ಖಾವಿಗೆ ಅವಳ ಬೆವರ,
ಹನಿಗಳು ಇಂಗಿ ಆವಿಯಾಗಿ ಮೋಡ
ಕಟ್ಟಿವೆ ಮನೆಯ ಮಾಡಿನ ಮೇಲೆ
ಅವಳೀಗ ನೀಲಿ ಆಕಾಶದ ಜೀವ ಹನಿ.

ಬಸವಳಿದ ಹೆರಿಗೆ ಮನೆ ಸಂಭ್ರಮ
ಸಾಂಬ್ರಾಣಿ ಹೊಗೆಯ ಅಗ್ನಿಕುಂಡ
ಬೆವರ ಋಣ ಉಪ್ಪಿನ ಋಣ
ಎಲ್ಲವನ್ನು ಅಂಟಿಸಿಕೊಂಡ ಅಡುಗೆ ಮನೆ,
ಗೋಡೆ ಅಲ್ಲಲ್ಲಿ ಹಕ್ಕಳು, ತೇಪೆಯ ಸಾರಣಿ
ಹಿಡಿದ್ದಾಳೆ. ತಿಕ್ಕಿದ ಕೊಡಪಾನಗಳಲಿ
ತುಂಬಿ ಜೀವಜಲ ಅವಳು ನದಿಯಾದವಳು.

ಕಣ್ಣು ಮುಚ್ಚಿ ನಿದ್ರಿಸುವ ಕರುಳ ಬಳ್ಳಿ
ತಟ್ಟಿ ಹಬ್ಬಲೆಂದು ಚಪ್ಪರ ಹಾಕಿ
ಪ್ರೀತಿ ಮಮತೆಯ ನೀರೆರೆದು
ಅಂಟಿನ ದಂಟಿನಲಿ ಮೊಗ್ಗು ಅರಳಿಸಿ
ಹಂತ ಹಂತಕ್ಕೇರಿಸುವ ಮಲ್ಲಿಗೆ ಗಿಡ
ಘಮ್ಮೆಂದು ಸೂಸಿ ಸೌರಭ ಒಳ ಹೊರಗೆ
ಗಾಳಿ ಗಂಧವಾಗಿ ಪಸರಿಸಿ ಚಂದನವಾದವಳು.

ಕಣ್ಣ ಬೊಂಬೆಯ ಒಲವಿನಲಿ ಕನಸು ಹರಡಿ
ಕೈ ಹಿಡಿದು ಕಾಲ ಚಲನೆ ಕಲಿಸಿದವಳು
ಪ್ರೀತಿ ಮನಕೆ ಬೀಜಬಿತ್ತಿ ಹಸಿರು ಚಿಗುರಿಸಿ
ಹದ ಮಾಡಿದ ಭೂಮಿ ತುಂಬ ಚರಗ ಚೆಲ್ಲಿ
ನಿಚ್ಚಳದ ಹಾದಿಯಲಿ ಸಾಲು ದೀಪವಿರಿಸಿ
ಎದೆಯ ಹಾಲಿನ ಪಾಯಸ ಉಣಿಸಿ
ಒಲವ ಹುಟ್ಟಿಸಿ ದೇವರ ಮನೆಯ ಮೂರ್ತಿಯಾದವಳು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...