Home / ಕವನ / ಕವಿತೆ / ಅವ್ವ

ಅವ್ವ

ರೊಟ್ಟಿ ತಟ್ಟೀ ತಟ್ಟೀ ಅವ್ವನ
ಕೈಯ ರೇಖೆಗಳು ಕರಗಿ
ಚಿಕ್ಕೀ ಬಳೆಗಳು ಮಾಸಿವೆ
ಒಲೆಯ ಖಾವಿಗೆ ಅವಳ ಬೆವರ,
ಹನಿಗಳು ಇಂಗಿ ಆವಿಯಾಗಿ ಮೋಡ
ಕಟ್ಟಿವೆ ಮನೆಯ ಮಾಡಿನ ಮೇಲೆ
ಅವಳೀಗ ನೀಲಿ ಆಕಾಶದ ಜೀವ ಹನಿ.

ಬಸವಳಿದ ಹೆರಿಗೆ ಮನೆ ಸಂಭ್ರಮ
ಸಾಂಬ್ರಾಣಿ ಹೊಗೆಯ ಅಗ್ನಿಕುಂಡ
ಬೆವರ ಋಣ ಉಪ್ಪಿನ ಋಣ
ಎಲ್ಲವನ್ನು ಅಂಟಿಸಿಕೊಂಡ ಅಡುಗೆ ಮನೆ,
ಗೋಡೆ ಅಲ್ಲಲ್ಲಿ ಹಕ್ಕಳು, ತೇಪೆಯ ಸಾರಣಿ
ಹಿಡಿದ್ದಾಳೆ. ತಿಕ್ಕಿದ ಕೊಡಪಾನಗಳಲಿ
ತುಂಬಿ ಜೀವಜಲ ಅವಳು ನದಿಯಾದವಳು.

ಕಣ್ಣು ಮುಚ್ಚಿ ನಿದ್ರಿಸುವ ಕರುಳ ಬಳ್ಳಿ
ತಟ್ಟಿ ಹಬ್ಬಲೆಂದು ಚಪ್ಪರ ಹಾಕಿ
ಪ್ರೀತಿ ಮಮತೆಯ ನೀರೆರೆದು
ಅಂಟಿನ ದಂಟಿನಲಿ ಮೊಗ್ಗು ಅರಳಿಸಿ
ಹಂತ ಹಂತಕ್ಕೇರಿಸುವ ಮಲ್ಲಿಗೆ ಗಿಡ
ಘಮ್ಮೆಂದು ಸೂಸಿ ಸೌರಭ ಒಳ ಹೊರಗೆ
ಗಾಳಿ ಗಂಧವಾಗಿ ಪಸರಿಸಿ ಚಂದನವಾದವಳು.

ಕಣ್ಣ ಬೊಂಬೆಯ ಒಲವಿನಲಿ ಕನಸು ಹರಡಿ
ಕೈ ಹಿಡಿದು ಕಾಲ ಚಲನೆ ಕಲಿಸಿದವಳು
ಪ್ರೀತಿ ಮನಕೆ ಬೀಜಬಿತ್ತಿ ಹಸಿರು ಚಿಗುರಿಸಿ
ಹದ ಮಾಡಿದ ಭೂಮಿ ತುಂಬ ಚರಗ ಚೆಲ್ಲಿ
ನಿಚ್ಚಳದ ಹಾದಿಯಲಿ ಸಾಲು ದೀಪವಿರಿಸಿ
ಎದೆಯ ಹಾಲಿನ ಪಾಯಸ ಉಣಿಸಿ
ಒಲವ ಹುಟ್ಟಿಸಿ ದೇವರ ಮನೆಯ ಮೂರ್ತಿಯಾದವಳು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...