ಕುಂತಿ

ಸೂರ್ಯ ಕಂತಿದ್ದಾನೆ ಅವಳು
ದಿನದ ದಗದ ಮುಗಿಸಿ ಹೊರಳುತ್ತಿದ್ದಾಳೆ
ಧೂಳು ಕಾಲುದಾರಿಯಲ್ಲಿ
ಉಸುಕಿನಲ್ಲಿ ಅವಳ ಹೆಜ್ಜೆಗಳು
ಮೂಡುವದಿಲ್ಲ, ಬರೀ ನಿಟ್ಟುಸಿರು ಕೇಳುತ್ತದೆ.

ಮಗಳು ಈ ದಿನ ಯಾಕೋ
ಮಂಕಾಗಿದ್ದಳು ಹಾರಿ ಬರುವ
ಹಗಲ ಬಿಸಿಲಿಗೆ ಹೆದರಿದ್ದಾಳೆ,
ಅಪ್ಪನ ಕಣ್ಣಲ್ಲಿ ನಿಗಿ ನಿಗಿ ಸೂರ್ಯ!
ಉತ್ತರ ಸಿಗದ ಪ್ರಶ್ನೆ ಪತ್ರಿಕೆಗಳು

ಭ್ರಮೆಯಲಿ ನಡುಗೆಯ ಕನಸು
ತೊಯ್ದ ಒರೆಯಲಿ ಗಂಜೀ
ಬೇಯಿಸುವ ಪರಿಪಾಠ, ಮುಳ್ಳು
ತುಂಬಿದ ಕಳ್ಳೀಕಂಠಿ ಓಣಿ
ನದಿಯೊಳಗೆ ಅತ್ತ ಇತ್ತ ತೇಲುವ ದೋಣಿ.

ತಲೆಯಿರುವ ಜಾಗದಲಿ ಹಣ್ಣಾದ
ಕೂದಲು ಗಂಟು, ಮಾಸಿದ ಚಿಕ್ಕೀ ಬಳೆಗಳು
ಹಚ್ಚಾಗಿವೆ ಎದೆಯ ಭಾರ ಪುಟ್ಟೀ
ಒಂಟಿಯಾಗಿ ನಡೆದಿದ್ದಾಳೆ ಕುಂತೀ
ಎಲ್ಲಾ ಸರಿಯುವ ಜಗದ ಪಾಡು.

ಮಕ್ಕಳು ಕಾಲು ತುಂಬ ಬಿಗಿದ ಸರಪಳಿ
ಹಾಲು ಉಣಿಸಿದ ತಟ್ಟೆಯಲಿ ವಿಷ
ಮನೆತುಂಬ ಹರಡಿದ ಹಗೆ ಹೊಗೆ
ಬೀದಿಗೆ ಬಂದು ಹೊರಳಾಡಿದ ಕವಿತೆ
ಕತ್ತಲು ಆಕಾಶದ ಅಂಬರದಲಿ ಚಿಕ್ಕಿಗಳಿಲ್ಲ.

ಒಂಟಿ ಮನೆಯಲಿ ಹೊರಳಾಡಿದ
ಕುಂತಿ ತಾಯಿ ಮನಸ್ಸು ಮರುಗಿತು
ಬೆನ್ನಿಗಂಟಿದ ಯುದ್ಧ ವಾಸನೆ ತಿಳಿ
ಗೇಡಿನ ಕೇಡಿನ ಆಟದಲಿ ಮೈಮರೆತವರು
ಕೇಳಲಿಲ್ಲ ಅವಳ ಹೃದಯದ ಕೂಗು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗನಿಗೆ
Next post ನಿವೇದನೆ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…