Home / ಕವನ / ಕವಿತೆ / ಕುಂತಿ

ಕುಂತಿ

ಸೂರ್ಯ ಕಂತಿದ್ದಾನೆ ಅವಳು
ದಿನದ ದಗದ ಮುಗಿಸಿ ಹೊರಳುತ್ತಿದ್ದಾಳೆ
ಧೂಳು ಕಾಲುದಾರಿಯಲ್ಲಿ
ಉಸುಕಿನಲ್ಲಿ ಅವಳ ಹೆಜ್ಜೆಗಳು
ಮೂಡುವದಿಲ್ಲ, ಬರೀ ನಿಟ್ಟುಸಿರು ಕೇಳುತ್ತದೆ.

ಮಗಳು ಈ ದಿನ ಯಾಕೋ
ಮಂಕಾಗಿದ್ದಳು ಹಾರಿ ಬರುವ
ಹಗಲ ಬಿಸಿಲಿಗೆ ಹೆದರಿದ್ದಾಳೆ,
ಅಪ್ಪನ ಕಣ್ಣಲ್ಲಿ ನಿಗಿ ನಿಗಿ ಸೂರ್ಯ!
ಉತ್ತರ ಸಿಗದ ಪ್ರಶ್ನೆ ಪತ್ರಿಕೆಗಳು

ಭ್ರಮೆಯಲಿ ನಡುಗೆಯ ಕನಸು
ತೊಯ್ದ ಒರೆಯಲಿ ಗಂಜೀ
ಬೇಯಿಸುವ ಪರಿಪಾಠ, ಮುಳ್ಳು
ತುಂಬಿದ ಕಳ್ಳೀಕಂಠಿ ಓಣಿ
ನದಿಯೊಳಗೆ ಅತ್ತ ಇತ್ತ ತೇಲುವ ದೋಣಿ.

ತಲೆಯಿರುವ ಜಾಗದಲಿ ಹಣ್ಣಾದ
ಕೂದಲು ಗಂಟು, ಮಾಸಿದ ಚಿಕ್ಕೀ ಬಳೆಗಳು
ಹಚ್ಚಾಗಿವೆ ಎದೆಯ ಭಾರ ಪುಟ್ಟೀ
ಒಂಟಿಯಾಗಿ ನಡೆದಿದ್ದಾಳೆ ಕುಂತೀ
ಎಲ್ಲಾ ಸರಿಯುವ ಜಗದ ಪಾಡು.

ಮಕ್ಕಳು ಕಾಲು ತುಂಬ ಬಿಗಿದ ಸರಪಳಿ
ಹಾಲು ಉಣಿಸಿದ ತಟ್ಟೆಯಲಿ ವಿಷ
ಮನೆತುಂಬ ಹರಡಿದ ಹಗೆ ಹೊಗೆ
ಬೀದಿಗೆ ಬಂದು ಹೊರಳಾಡಿದ ಕವಿತೆ
ಕತ್ತಲು ಆಕಾಶದ ಅಂಬರದಲಿ ಚಿಕ್ಕಿಗಳಿಲ್ಲ.

ಒಂಟಿ ಮನೆಯಲಿ ಹೊರಳಾಡಿದ
ಕುಂತಿ ತಾಯಿ ಮನಸ್ಸು ಮರುಗಿತು
ಬೆನ್ನಿಗಂಟಿದ ಯುದ್ಧ ವಾಸನೆ ತಿಳಿ
ಗೇಡಿನ ಕೇಡಿನ ಆಟದಲಿ ಮೈಮರೆತವರು
ಕೇಳಲಿಲ್ಲ ಅವಳ ಹೃದಯದ ಕೂಗು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...