ರೂಪಾಂತರ

ಕಡಲೊಳಗಿನ ಹನಿ ಹನಿ
ಸೂರ್ಯನೊಳಗಿನ ಬೆಳಕ ರೇಖೆಗಳು
ಎಲ್ಲ ಜಂಜಡವ ಹೊತ್ತು ಸಾಗಿದ ಕಾಲ.

ಮನದ ಭಾಷೆದ ಅರಳಿದ ಶಬ್ದ
ಶಬ್ದದೊಳಗಿನ ನಿಶ್ಶಬ್ದ
ಎಲ್ಲ ಮಥಿಸಿದ ಆತ್ಮ ಸಂಗಾತ.

ಕನವರಿಸಿದ ಏಕಾಂತ
ಮೊಳಕೆ ಒಡೆಯುವ ಬೀಜ
ಎಲ್ಲ ಫಸಲೊಡೆದ ಪೈರು.

ಕುಡಿ ಒಡೆದ ಚಿಗುರು
ಸ್ಪರ್ಶಗಳ ಲಯ ಬಾಷೆ
ಎಲ್ಲ ಹೆಮ್ಮರವಾಗುವ ವೃಕ್ಷ.

ಹನಿಗೆ ಚಿಗುರಿದ ಬೇರು
ಘನಕೆ ಅರಳಿದ ಕೊಯ್ಲ
ಎಲ್ಲ ಸುಗ್ಗೀ ಹಿಗ್ಗಿನ ಮ್ಯಾಳ.

ಚಿಗುರಿ ಹುಟ್ಟಿ ಬೆಳೆದು ಸುಳಿದ
ದಿಕ್ಕಿಗೆ ಚಲಿಸಿದ ಗಾಳಿ ಗಂಧ
ಎಲ್ಲ ಬಾಗಿಲು ತೆರೆದು ದಾಟಿ ಹೋದ ಹಕ್ಕಿ.

ಮಥಿಸಿದ ಬೆಳಕು ಚಿಗುರು ಭಾಷೆ
ಅರ್ವಿಭಾವಕೆ ಒಲುಮೆಯ ಹಾಡು
ಜಗದ ನೆಲಮುಗಿಲುಗಳ ಎಲ್ಲ ರೂಪಾಂತರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮದುವೆಯಾಯಿತು ಉಷೆಗೆ
Next post ಅಮೃತ ತರಂಗಿಣಿ

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys