Home / ಕವನ / ಕವಿತೆ / ಸ್ವಗತ

ಸ್ವಗತ

ಹೆಜ್ಜೆಗಳು ಸೋತು ದಿನದ ಸೂರ್ಯ
ಕಂತಿದ್ದಾನೆ ನಾಳೆಯ ಕಾಲವ ನಡೆಸುವ
ರಾತ್ರಿಯಲಿ ಚೆಲ್ಲಿವೆ ನಕ್ಷತ್ರಗಳು ಬಾನತುಂಬ
ಮನದ ಭಾವಕೆ ವಿದಾಯವಲ್ಲ ಇದು
ಹೊಸಹುಟ್ಟು ತೆರೆದುಕೊಳ್ಳುವ ಬಸಿರು
ಬಾಹು ಬಂಧನಗಳು ಹರಡಿವೆ ಇಳೆಯಲಿ.

ಸಿದ್ಧಾರ್ಥನ ಹುಡುಕಾಟದ ಕಳವಳ
ಎತ್ತಿ ಕುಡಿದ ಬಾಹುಬಲಿ ಯಾವುದು
ಸತ್ಯ ಈ ತಿಳಿಗೇಡಿ ವಿಸ್ಮಯ ಲೋಕದಲಿ
ನಿದ್ರೆಗೆ ಅಮಲು ಬರಿಸುವ ಸಂಜೆಯಲಿ
ಹಕ್ಕಿಗಳು ಹಾರಿವೆ ಹಿಂಡು ಹಿಂಡಾಗಿ
ಗೂಡು ಅರಸುತ್ತ ಅಲೆದಿವೆ ನಿರಂತರ ಸನ್ನೆಗಳಲಿ.

ಹತ್ತಿರ ಸುಳಿದಾಡಿದ ಸ್ತರಗಳು
ಸೋಕಲಿಲ್ಲ ಹೃದಯದ ಬಾಗಿಲುಗಳಲಿ
ಕೈ ತಟ್ಟಿ ತಪ್ಪಾಳೆ ತಟ್ಟದವರು ಹೀಗೆ
ಸರಳವಾಗಿ ಒಳ ಬಂದು ನಗಲಿಲ್ಲ ಒಂದು ತಿಳಿನಗೆ,
ಜ್ಞಾಪಕವಿಲ್ಲದೆ ಹಾಡುಗಳು ಒಮ್ಮೆಲೇ
ಒಲಿದು ರಾಗಗಳಾಗುವುದಿಲ್ಲ ರೀತಿ ರಿವಾಜಗಳು.

ನದಿಯಲಿ ರಮಿಸುತ್ತ ಸಾಗಿವೆ
ಬೆಳಕಿನ ಬೀಜಗಳು ಸಂತೆಯಲಿ
ಸಂತನೊಬ್ಬ ಸರಿದ್ದಾನೆ ಯಾರಿಗೂ ತಿಳಿಯದಂತೆ,
ಕಂದೀಲು ಒರೆಸುವ ಕೈಗಳು ಅಲುಗಾಡಿವೆ
ಪಾರಿವಾಳಗಳು ಸತ್ತಿವೆ ಗೇಟವೇ ಆಫ್ ಇಂಡಿಯಾದಲಿ,
ಉಲ್ಕಾಪಾತದ ಕತ್ತಲೆಯಲಿ ಹೊಸದಾರಿಗಳು
ತೆರೆದುಕೊಂಡಿವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...