Home / ಕವನ / ಕವಿತೆ / ಸ್ವಗತ

ಸ್ವಗತ

ಹೆಜ್ಜೆಗಳು ಸೋತು ದಿನದ ಸೂರ್ಯ
ಕಂತಿದ್ದಾನೆ ನಾಳೆಯ ಕಾಲವ ನಡೆಸುವ
ರಾತ್ರಿಯಲಿ ಚೆಲ್ಲಿವೆ ನಕ್ಷತ್ರಗಳು ಬಾನತುಂಬ
ಮನದ ಭಾವಕೆ ವಿದಾಯವಲ್ಲ ಇದು
ಹೊಸಹುಟ್ಟು ತೆರೆದುಕೊಳ್ಳುವ ಬಸಿರು
ಬಾಹು ಬಂಧನಗಳು ಹರಡಿವೆ ಇಳೆಯಲಿ.

ಸಿದ್ಧಾರ್ಥನ ಹುಡುಕಾಟದ ಕಳವಳ
ಎತ್ತಿ ಕುಡಿದ ಬಾಹುಬಲಿ ಯಾವುದು
ಸತ್ಯ ಈ ತಿಳಿಗೇಡಿ ವಿಸ್ಮಯ ಲೋಕದಲಿ
ನಿದ್ರೆಗೆ ಅಮಲು ಬರಿಸುವ ಸಂಜೆಯಲಿ
ಹಕ್ಕಿಗಳು ಹಾರಿವೆ ಹಿಂಡು ಹಿಂಡಾಗಿ
ಗೂಡು ಅರಸುತ್ತ ಅಲೆದಿವೆ ನಿರಂತರ ಸನ್ನೆಗಳಲಿ.

ಹತ್ತಿರ ಸುಳಿದಾಡಿದ ಸ್ತರಗಳು
ಸೋಕಲಿಲ್ಲ ಹೃದಯದ ಬಾಗಿಲುಗಳಲಿ
ಕೈ ತಟ್ಟಿ ತಪ್ಪಾಳೆ ತಟ್ಟದವರು ಹೀಗೆ
ಸರಳವಾಗಿ ಒಳ ಬಂದು ನಗಲಿಲ್ಲ ಒಂದು ತಿಳಿನಗೆ,
ಜ್ಞಾಪಕವಿಲ್ಲದೆ ಹಾಡುಗಳು ಒಮ್ಮೆಲೇ
ಒಲಿದು ರಾಗಗಳಾಗುವುದಿಲ್ಲ ರೀತಿ ರಿವಾಜಗಳು.

ನದಿಯಲಿ ರಮಿಸುತ್ತ ಸಾಗಿವೆ
ಬೆಳಕಿನ ಬೀಜಗಳು ಸಂತೆಯಲಿ
ಸಂತನೊಬ್ಬ ಸರಿದ್ದಾನೆ ಯಾರಿಗೂ ತಿಳಿಯದಂತೆ,
ಕಂದೀಲು ಒರೆಸುವ ಕೈಗಳು ಅಲುಗಾಡಿವೆ
ಪಾರಿವಾಳಗಳು ಸತ್ತಿವೆ ಗೇಟವೇ ಆಫ್ ಇಂಡಿಯಾದಲಿ,
ಉಲ್ಕಾಪಾತದ ಕತ್ತಲೆಯಲಿ ಹೊಸದಾರಿಗಳು
ತೆರೆದುಕೊಂಡಿವೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...