ವಿಪರ್ಯಾಸ

ಮುಗ್ಧತೆಯಲ್ಲಿ ಕೆಲ ಎಚ್ಚರಿಕೆಗಳ
ಇಟ್ಟುಕೊಳ್ಳಬೇಕಾಗುತ್ತದೆ ಇಲ್ಲದಿದ್ದರೆ
ಅದು ಬೂದಿ ಮುಚ್ಚಿದ ಕೆಂಡ
ಎದೆ ಸುಡುತ್ತದೆ.

ಆತ್ಮೀಯತೆಯಲಿ ಕೆಲ ದೂರ
ಹೊಂದಬೇಕು ಇಲ್ಲದಿದ್ದರೆ ಅದು
ಅಸ್ಥಿತ್ವವನ್ನು ಮಂಜಿನಂತೆ ಕರಗಿ
ನೀರಾಗಿ ಹರಿಸುವುದು.

ಗೇಟಿನಾಚೆಯ ಗೆಳೆಯ ಕೂಡಾ
ಒಮ್ಮೊಮ್ಮೆ ಈಷ್ಯೆಯಲಿ ಕುದಿದು
ಬಿಸಿ ಎಣ್ಣೆಯ ಶಾಖ ತಗುಲಿಸಿ
ಮನೆಯ ಬಾಗಿಲ ಬೀಗ ಮುರಿಯುವುದು.

ಕೋಪದಲಿ ಅಂದ ಮಾತುಗಳು
ಲೆಕ್ಕವಿಟ್ಟವರು ಹಲವರು ಅವರು
ಬೇಟೆಯಾಡಬಹುದು ಬರುವ ದಿನ
ಎಚ್ಚರಿಕೆಯ ಗಂಟೆಯಾಗಬಲ್ಲದು.

ವ್ಯಕ್ತ ಅವ್ಯಕ್ತ ರಿಕ್ತ ಅತಿರಿಕ್ತಗಳೆಲ್ಲವೂ
ಗುಮಾನಿಗಳಾಗಿಯೇ ಇದ್ದು ಒಮ್ಮೊಮ್ಮೆ
ಪ್ರಶ್ನೆಗಳಿಗೆ ಉತ್ತರವಾಗಬಲ್ಲದು
ಸಂಶಯದಲಿ ಒಂದು ಹಾಯಿ ನಿನ್ನ ಕಾಡಬಲ್ಲದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನಸಿನ ಮೋಡಿ
Next post ಸ್ವಗತ ಗೀತ

ಸಣ್ಣ ಕತೆ

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys