Home / ಕವನ / ಕವಿತೆ / ವಿಪರ್ಯಾಸ

ವಿಪರ್ಯಾಸ

ಮುಗ್ಧತೆಯಲ್ಲಿ ಕೆಲ ಎಚ್ಚರಿಕೆಗಳ
ಇಟ್ಟುಕೊಳ್ಳಬೇಕಾಗುತ್ತದೆ ಇಲ್ಲದಿದ್ದರೆ
ಅದು ಬೂದಿ ಮುಚ್ಚಿದ ಕೆಂಡ
ಎದೆ ಸುಡುತ್ತದೆ.

ಆತ್ಮೀಯತೆಯಲಿ ಕೆಲ ದೂರ
ಹೊಂದಬೇಕು ಇಲ್ಲದಿದ್ದರೆ ಅದು
ಅಸ್ಥಿತ್ವವನ್ನು ಮಂಜಿನಂತೆ ಕರಗಿ
ನೀರಾಗಿ ಹರಿಸುವುದು.

ಗೇಟಿನಾಚೆಯ ಗೆಳೆಯ ಕೂಡಾ
ಒಮ್ಮೊಮ್ಮೆ ಈಷ್ಯೆಯಲಿ ಕುದಿದು
ಬಿಸಿ ಎಣ್ಣೆಯ ಶಾಖ ತಗುಲಿಸಿ
ಮನೆಯ ಬಾಗಿಲ ಬೀಗ ಮುರಿಯುವುದು.

ಕೋಪದಲಿ ಅಂದ ಮಾತುಗಳು
ಲೆಕ್ಕವಿಟ್ಟವರು ಹಲವರು ಅವರು
ಬೇಟೆಯಾಡಬಹುದು ಬರುವ ದಿನ
ಎಚ್ಚರಿಕೆಯ ಗಂಟೆಯಾಗಬಲ್ಲದು.

ವ್ಯಕ್ತ ಅವ್ಯಕ್ತ ರಿಕ್ತ ಅತಿರಿಕ್ತಗಳೆಲ್ಲವೂ
ಗುಮಾನಿಗಳಾಗಿಯೇ ಇದ್ದು ಒಮ್ಮೊಮ್ಮೆ
ಪ್ರಶ್ನೆಗಳಿಗೆ ಉತ್ತರವಾಗಬಲ್ಲದು
ಸಂಶಯದಲಿ ಒಂದು ಹಾಯಿ ನಿನ್ನ ಕಾಡಬಲ್ಲದು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...