Home / ಕವನ / ಕವಿತೆ / ಸಮುದ್ರ ಗೀತೆ

ಸಮುದ್ರ ಗೀತೆ

ಸಮುದ್ರದ ಗೀತೆ ಮುಗಿಯುವದಿಲ್ಲ
ಲೆಕ್ಕ ಪುಸ್ತಕದಲಿ ಬಾಕಿ ಕೊಡಬೇಕಾಗಿದೆ
ಋತುಗಳು ಬದಲಾಗುತ್ತವೆ
ಬಿಡುಗಡೆಯ ಕನಸುಗಳು ಕಾಣಬೇಕಾಗಿದೆ.

ಮಾತನಾಡಿದ ಮಾತುಗಳು
ಹಿಂದೆ ತೆಗೆದುಕೊಳ್ಳುವದಕ್ಕೆ ಬರುವುದಿಲ್ಲ.
ನೀಲ ಗಗನದ ಹೊಳೆವ ಚಿಕ್ಕಿಗಳು
ಹೊನ್ನ ಮರಳಿನಲಿ ಅಡಗುವುದಿಲ್ಲ.

ಬಯಕೆ ಪ್ರಾರ್ಥನೆಗಳು ಉಲಿದಾಗ
ಅವನು ಎದೆಗೆ ಅಪ್ಪಿಕೊಳ್ಳುವನು
ವಸಂತ ವೈಶಾಖದಲಿ ಹುಟ್ಟುವುದು
ಶಿಶಿರದಲಿ ಬಾಡುವುದು ಅಲೆಯ ಹಾಡು.

ನದಿಯ ತೀರದ ಚೆಲುವಿನ ಮರ
ಹಸಿದವರಿಗೆ ನೀಡುತ್ತದೆ ಫಲಗಳ
ಸಂಜೆ ಬೆಳಕಿನಾಚೆಯೊಳು
ಮುಳುಗುವ ಸೂರ್ಯ ಕನಸು ಕಟ್ಟುತ್ತಾನೆ.

ಮೌನದಲಿ ಹೂವುಗಳು
ಅರಳುವುದು ಬಾಡುವುದು
ಬೆಳಕಿನ ಸೂರ್ಯ ಬಯಕೆಯಂತೆ
ಅವುಗಳನ್ನು ಚುಂಬಿಸಿಯೇ ಚುಂಬಿಸುತ್ತಾನೆ.

ಸಾಗರಕ್ಕೆ ವಿರಹದಿಂದ ನಿದ್ರೆ ಇಲ್ಲ
ಇರುವ ಜ್ವಾಲೆಗೆ ಮನ ಸಿಲುಕಿದೆ
ಸಂತೈಸುವುದು ಮೌನದಲಿ ಅಲೆಗಳು
ಸಾಗರ ಮತ್ತು ನನ್ನನ್ನು ಕತ್ತಲಲಿ.

ಪ್ರೇಮದ ಅಕ್ಷರಗಳು ಒಂದು
ಮಾಡಿದವು ನಮ್ಮೆಲ್ಲರ ಕನಸುಗಳ
ಯಾರು ತಾನೆ ಅಗಲಿಸಬಲ್ಲರು
ಗೋರಿಯಲಿ ಒಂದಾದ ನಮ್ಮಾತ್ಮಗಳ.

ಮುಳುಗುವ ಸೂರ್ಯ ಸುರಿಸಿದ
ಚಿನ್ನದ ಅಂಚುಗಳ ಮೋಡಕೆ
ಆ ದೂರದಲಿ ಆತ್ಮ ನುಡಿಯಿತು
ಓ ದೇವರೇ ನನಗೆ ಜಾಗವಿದೆ ಎಂದು.

ತುಂಬ ಪ್ರೀತಿಸುದಕೆ ಬದುಕು ಒಂದು
ಮೆರವಣಿಗೆ ನಿಧಾನವಾಗಿ ಹೆಜ್ಜೆ
ಹಾಕಲಾರದವರು ಮೆಲ್ಲಕೆ ಸರಿವರು
ಪಕ್ಷಕ್ಕೆ ಚಲಿಸುವ ಸೂರ್ಯ ಕಂತಿದ ಹಾಗೆ.

ಏಕಾಂತದ ಬಿರುಗಾಳಿ ನಮ್ಮ
ಸುತ್ತ ಎಲ್ಲ ರೆಂಬೆಗಳ ಕತ್ತರಿಸಿ
ಬೇರುಗಳು ಇಳಿದಿವೆ ಜೀವಂತವಾಗಿ
ಭೂಮಿಯೊಳಗೆ ಸೂರ್ಯ ನಗುತ್ತಾನೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...