Home / ಕವನ / ಕವಿತೆ / ಸಮುದ್ರ ಗೀತೆ

ಸಮುದ್ರ ಗೀತೆ

ಸಮುದ್ರದ ಗೀತೆ ಮುಗಿಯುವದಿಲ್ಲ
ಲೆಕ್ಕ ಪುಸ್ತಕದಲಿ ಬಾಕಿ ಕೊಡಬೇಕಾಗಿದೆ
ಋತುಗಳು ಬದಲಾಗುತ್ತವೆ
ಬಿಡುಗಡೆಯ ಕನಸುಗಳು ಕಾಣಬೇಕಾಗಿದೆ.

ಮಾತನಾಡಿದ ಮಾತುಗಳು
ಹಿಂದೆ ತೆಗೆದುಕೊಳ್ಳುವದಕ್ಕೆ ಬರುವುದಿಲ್ಲ.
ನೀಲ ಗಗನದ ಹೊಳೆವ ಚಿಕ್ಕಿಗಳು
ಹೊನ್ನ ಮರಳಿನಲಿ ಅಡಗುವುದಿಲ್ಲ.

ಬಯಕೆ ಪ್ರಾರ್ಥನೆಗಳು ಉಲಿದಾಗ
ಅವನು ಎದೆಗೆ ಅಪ್ಪಿಕೊಳ್ಳುವನು
ವಸಂತ ವೈಶಾಖದಲಿ ಹುಟ್ಟುವುದು
ಶಿಶಿರದಲಿ ಬಾಡುವುದು ಅಲೆಯ ಹಾಡು.

ನದಿಯ ತೀರದ ಚೆಲುವಿನ ಮರ
ಹಸಿದವರಿಗೆ ನೀಡುತ್ತದೆ ಫಲಗಳ
ಸಂಜೆ ಬೆಳಕಿನಾಚೆಯೊಳು
ಮುಳುಗುವ ಸೂರ್ಯ ಕನಸು ಕಟ್ಟುತ್ತಾನೆ.

ಮೌನದಲಿ ಹೂವುಗಳು
ಅರಳುವುದು ಬಾಡುವುದು
ಬೆಳಕಿನ ಸೂರ್ಯ ಬಯಕೆಯಂತೆ
ಅವುಗಳನ್ನು ಚುಂಬಿಸಿಯೇ ಚುಂಬಿಸುತ್ತಾನೆ.

ಸಾಗರಕ್ಕೆ ವಿರಹದಿಂದ ನಿದ್ರೆ ಇಲ್ಲ
ಇರುವ ಜ್ವಾಲೆಗೆ ಮನ ಸಿಲುಕಿದೆ
ಸಂತೈಸುವುದು ಮೌನದಲಿ ಅಲೆಗಳು
ಸಾಗರ ಮತ್ತು ನನ್ನನ್ನು ಕತ್ತಲಲಿ.

ಪ್ರೇಮದ ಅಕ್ಷರಗಳು ಒಂದು
ಮಾಡಿದವು ನಮ್ಮೆಲ್ಲರ ಕನಸುಗಳ
ಯಾರು ತಾನೆ ಅಗಲಿಸಬಲ್ಲರು
ಗೋರಿಯಲಿ ಒಂದಾದ ನಮ್ಮಾತ್ಮಗಳ.

ಮುಳುಗುವ ಸೂರ್ಯ ಸುರಿಸಿದ
ಚಿನ್ನದ ಅಂಚುಗಳ ಮೋಡಕೆ
ಆ ದೂರದಲಿ ಆತ್ಮ ನುಡಿಯಿತು
ಓ ದೇವರೇ ನನಗೆ ಜಾಗವಿದೆ ಎಂದು.

ತುಂಬ ಪ್ರೀತಿಸುದಕೆ ಬದುಕು ಒಂದು
ಮೆರವಣಿಗೆ ನಿಧಾನವಾಗಿ ಹೆಜ್ಜೆ
ಹಾಕಲಾರದವರು ಮೆಲ್ಲಕೆ ಸರಿವರು
ಪಕ್ಷಕ್ಕೆ ಚಲಿಸುವ ಸೂರ್ಯ ಕಂತಿದ ಹಾಗೆ.

ಏಕಾಂತದ ಬಿರುಗಾಳಿ ನಮ್ಮ
ಸುತ್ತ ಎಲ್ಲ ರೆಂಬೆಗಳ ಕತ್ತರಿಸಿ
ಬೇರುಗಳು ಇಳಿದಿವೆ ಜೀವಂತವಾಗಿ
ಭೂಮಿಯೊಳಗೆ ಸೂರ್ಯ ನಗುತ್ತಾನೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...