Home / ಕವನ / ಹಾಯ್ಕು / ಹಾಯ್ಕಗಳು

ಹಾಯ್ಕಗಳು

ಬೇಸಿಗೆಯ ಸಂಜೆ
ತಂಗಾಳಿ ಬೀಸಿತು
ತಂಪಿನಲಿ ಅವನ ಉಸಿರಿತ್ತು.

ರಾತ್ರಿಯಲಿ ಆಕಾಶದ
ತುಂಬ ಬೆಳದಿಂಗಳು ಹರಡಿದೆ
ಅಂಗಳದಲಿ ಮಕ್ಕಳು ತುಂಬಿಕೊಂಡಿವೆ.

ಮುಂಜಾವಿನಲಿ
ಹನಿಹನಿ ಇಬ್ಬನಿ ಹಾಸಿವೆ
ನನ್ನಲ್ಲಿ ಕವಿತೆಯ ಜೀವ ಒಸರುತಿದೆ.

ಮಧ್ಯಾಹ್ನದಲಿ
ಒಂದು ಚಮಚ ನೀರು
ಭಾವಗಳನ್ನು ನಿಶ್ಶಬ್ದವಾಗಿಸುತ್ತಿದೆ.

ಓಣಿಯಲಿ ನಡುರಾತ್ರಿ
ಹೆಜ್ಜೆ ಸಪ್ಪಳಗಳು
ನಾಯಿಗಳು ತುಂಬ ಊಳಿಡುತ್ತವೆ.

ಮಗು ಗಲಗಲ ತೊದಲಿತು
ಎದೆಯಲಿ
ದೇವಸ್ಥಾನದ ಗಂಟೆಗಳು ಮೊಳಗಿದವು.

ಅಮವಾಸ್ಯೆಯ ನಂತರ
ಚಂದ್ರ ಹುಟ್ಟುತ್ತಾನೆ
ಕಲ್ಲು ಸಂದಿಯಿಂದ ಕಪ್ಪೆಗಳು ವಟಗುಟ್ಟುತ್ತವೆ.

ಚಿಟ್ಟೆ ಕೆಂಪು ದಾಸವಾಳದ
ಮೇಲೆ ಹಾರಾಡುತ್ತವೆ
ಸೂರ್ಯ ಕೆಂಪಾಗಿ ಉದಯಿಸುತ್ತಾನೆ.

ಮಾಗಿಯ ಚಳಿಯಲಿ
ಹೊದ್ದ ಕಂಬಳಿಯಿಂದ
ನೆನಪಿನ ಕಂಬಳಿ ಹುಳಗಳಿದ್ದವು.

ಚಳಿಗಾಲದ ಸಂಜೆ
ಗಾಳಿ ಸವರುತ್ತವೆ ಜೀವವ
ದೂರದಿಂದ ಉದುರುತ್ತದೆ ನೆರಳು

ಬೇಸಿಗೆಯಲಿ ಅಕಾಲಿಕ ಮಳೆ
ಮಣ್ಣವಾಸನೆಗೆ
ಎದೆಯ ಕನಸುಗಳು ಬಿರಿದವು.

ಸಮುದ್ರದ ದಂಡೆಯಲಿ
ಅಲೆಗಳು ಅಪ್ಪಳಿಸಿವೆ
ನಾನಿನ್ನು ಜೀವಂತವಾಗಿರುವೆ.

ಸಂಜೆ ಹೂವು ಗಿಡ
ಮುಲುಕಾಡಿ ಕಂಪಿಸಿವೆ
ಚಿಟ್ಟೆಭಾರ ಹೆಗಲಿಗೇರಿಸಿಕೊಂಡಿವೆ.

ಅವಳು ಬದುಕು ಬೇಡ ಅಂದಳು.
ಸಾಯಂಕಾಲ ದೇವರ ಮನೆ ನೀಲಾಂಜನದಲಿ
ಮಕ್ಕಳ ಕಣ್ಣುಗಳು ಮಿನುಗಿದವು.

ಈದ್ ಚಾಂದ ಹರಡಿವೆ ತಿಳಿ ಬೆಳದಿಂಗಳು
ಓಣಿಯಲಿ ಹಲಗೆಗಳು ಭಾರಿಸುತ್ತಲಿದೆ
ಬಣ್ಣದ ಹೋಳಿ ಮೃದುವಾಗಿ ಸಿಂಗರಿಸಿದೆ ಊರನು.

ಸಾವಿನ ಕರಿನೆರಳು ತಬ್ಬಿ
ತಲೆಯ ಕೂದಲೆಲ್ಲಾ ಬೋಳು
ವಸಂತನ ಆಗಮವಾಗಿದೆ ಹಸಿರು ಚಿಗುರುತ್ತದೆ.

ಬದುಕಿನ ಕೊನೆಯ ಕ್ಷಣಗಳು
ಸಾವು ತಬ್ಬಿದೆ ಎಷ್ಟೊಂದು
ಶಾಂತಿ ಹಿತಗಳು ಅರಳಿವೆ ಎದೆಯೊಳಗೆ.

ಆ ಪಕ್ಷಿಯ ಏಕಾಂತರ ಹಾಡು
ನೇವರಿಸುತ್ತದೆ ಅವಳ ಕೂದಲು
ಎಲ್ಲಾ ಕಣಿವೆಗಳು ಬೆಳಕು ಹರಡುತ್ತಿದೆ.

ವಸಂತ ಮತ್ತೆ ಬಂದಿದ್ದಾನೆ.
ಪುಟ್ಟ ಹುಲ್ಲುಗರಿಯ ಬೆನ್ನ ಮೇಲೆ
ಹನಿ ಇಬ್ಬನಿ ಕುಳಿತಿದೆ ಒಂದೇ.

ಮಳೆ ಬಿದ್ದು ಒದ್ದೆಯಾದ ಮಣ್ಣು
ಅರಳಿದವು ಕವಿತೆಯ ಕಣ್ಣು
ನಿಶ್ಶಬ್ದದಲಿ ಕವಿ ಕುಳಿತಿದ್ದಾನೆ ಒಬ್ಬನೇ.

ಈ ಮಧ್ಯಾಹ್ನದ ಬಿಸಿಲಿಗೆ
ಬೋಧಿ ಮರದ
ನೆರಳಿನ ಕನವರಿಕೆ.

ಉದಯಿಸುತ್ತಿರುವ ಮಂಕಾದ
ಸೂರ್ಯ ಕಂಬದ ಮೇಲೆ
ಒಂಟಿ ಹಕ್ಕಿ ನೆನಪು.

ಅಂಗಳದ ಸರಿಗೆ ತುಂಬ
ಬಟ್ಟೆಗಳು
ಹಾರಾಡಿವೆ ಬಣ್ಣದ ಚಿಟ್ಟೆಗಳು.

ನೀಲಿ ಬಾನ ತುಂಬ ನಕ್ಷತ್ರಗಳು
ಅರಳಿವೆ ಸುಗಂಧಿ ಅಂಗಳದಲಿ
ಮಿನುಗಿವೆ ಅವಳ ಕಣ್ಣುಗಳು.

ನಿರಂತರ ಚಲನೆಯ ದಾರಿ
ಮೂಡಿದ ಹೆಜ್ಜೆ ಗುರುತುಗಳು
ಅಳಿಸಿವೆ ಅವನ ನೆನಪು
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...