Home / ಕವನ / ಹಾಯ್ಕು / ಹಾಯ್ಕಗಳು

ಹಾಯ್ಕಗಳು

ಬೇಸಿಗೆಯ ಸಂಜೆ
ತಂಗಾಳಿ ಬೀಸಿತು
ತಂಪಿನಲಿ ಅವನ ಉಸಿರಿತ್ತು.

ರಾತ್ರಿಯಲಿ ಆಕಾಶದ
ತುಂಬ ಬೆಳದಿಂಗಳು ಹರಡಿದೆ
ಅಂಗಳದಲಿ ಮಕ್ಕಳು ತುಂಬಿಕೊಂಡಿವೆ.

ಮುಂಜಾವಿನಲಿ
ಹನಿಹನಿ ಇಬ್ಬನಿ ಹಾಸಿವೆ
ನನ್ನಲ್ಲಿ ಕವಿತೆಯ ಜೀವ ಒಸರುತಿದೆ.

ಮಧ್ಯಾಹ್ನದಲಿ
ಒಂದು ಚಮಚ ನೀರು
ಭಾವಗಳನ್ನು ನಿಶ್ಶಬ್ದವಾಗಿಸುತ್ತಿದೆ.

ಓಣಿಯಲಿ ನಡುರಾತ್ರಿ
ಹೆಜ್ಜೆ ಸಪ್ಪಳಗಳು
ನಾಯಿಗಳು ತುಂಬ ಊಳಿಡುತ್ತವೆ.

ಮಗು ಗಲಗಲ ತೊದಲಿತು
ಎದೆಯಲಿ
ದೇವಸ್ಥಾನದ ಗಂಟೆಗಳು ಮೊಳಗಿದವು.

ಅಮವಾಸ್ಯೆಯ ನಂತರ
ಚಂದ್ರ ಹುಟ್ಟುತ್ತಾನೆ
ಕಲ್ಲು ಸಂದಿಯಿಂದ ಕಪ್ಪೆಗಳು ವಟಗುಟ್ಟುತ್ತವೆ.

ಚಿಟ್ಟೆ ಕೆಂಪು ದಾಸವಾಳದ
ಮೇಲೆ ಹಾರಾಡುತ್ತವೆ
ಸೂರ್ಯ ಕೆಂಪಾಗಿ ಉದಯಿಸುತ್ತಾನೆ.

ಮಾಗಿಯ ಚಳಿಯಲಿ
ಹೊದ್ದ ಕಂಬಳಿಯಿಂದ
ನೆನಪಿನ ಕಂಬಳಿ ಹುಳಗಳಿದ್ದವು.

ಚಳಿಗಾಲದ ಸಂಜೆ
ಗಾಳಿ ಸವರುತ್ತವೆ ಜೀವವ
ದೂರದಿಂದ ಉದುರುತ್ತದೆ ನೆರಳು

ಬೇಸಿಗೆಯಲಿ ಅಕಾಲಿಕ ಮಳೆ
ಮಣ್ಣವಾಸನೆಗೆ
ಎದೆಯ ಕನಸುಗಳು ಬಿರಿದವು.

ಸಮುದ್ರದ ದಂಡೆಯಲಿ
ಅಲೆಗಳು ಅಪ್ಪಳಿಸಿವೆ
ನಾನಿನ್ನು ಜೀವಂತವಾಗಿರುವೆ.

ಸಂಜೆ ಹೂವು ಗಿಡ
ಮುಲುಕಾಡಿ ಕಂಪಿಸಿವೆ
ಚಿಟ್ಟೆಭಾರ ಹೆಗಲಿಗೇರಿಸಿಕೊಂಡಿವೆ.

ಅವಳು ಬದುಕು ಬೇಡ ಅಂದಳು.
ಸಾಯಂಕಾಲ ದೇವರ ಮನೆ ನೀಲಾಂಜನದಲಿ
ಮಕ್ಕಳ ಕಣ್ಣುಗಳು ಮಿನುಗಿದವು.

ಈದ್ ಚಾಂದ ಹರಡಿವೆ ತಿಳಿ ಬೆಳದಿಂಗಳು
ಓಣಿಯಲಿ ಹಲಗೆಗಳು ಭಾರಿಸುತ್ತಲಿದೆ
ಬಣ್ಣದ ಹೋಳಿ ಮೃದುವಾಗಿ ಸಿಂಗರಿಸಿದೆ ಊರನು.

ಸಾವಿನ ಕರಿನೆರಳು ತಬ್ಬಿ
ತಲೆಯ ಕೂದಲೆಲ್ಲಾ ಬೋಳು
ವಸಂತನ ಆಗಮವಾಗಿದೆ ಹಸಿರು ಚಿಗುರುತ್ತದೆ.

ಬದುಕಿನ ಕೊನೆಯ ಕ್ಷಣಗಳು
ಸಾವು ತಬ್ಬಿದೆ ಎಷ್ಟೊಂದು
ಶಾಂತಿ ಹಿತಗಳು ಅರಳಿವೆ ಎದೆಯೊಳಗೆ.

ಆ ಪಕ್ಷಿಯ ಏಕಾಂತರ ಹಾಡು
ನೇವರಿಸುತ್ತದೆ ಅವಳ ಕೂದಲು
ಎಲ್ಲಾ ಕಣಿವೆಗಳು ಬೆಳಕು ಹರಡುತ್ತಿದೆ.

ವಸಂತ ಮತ್ತೆ ಬಂದಿದ್ದಾನೆ.
ಪುಟ್ಟ ಹುಲ್ಲುಗರಿಯ ಬೆನ್ನ ಮೇಲೆ
ಹನಿ ಇಬ್ಬನಿ ಕುಳಿತಿದೆ ಒಂದೇ.

ಮಳೆ ಬಿದ್ದು ಒದ್ದೆಯಾದ ಮಣ್ಣು
ಅರಳಿದವು ಕವಿತೆಯ ಕಣ್ಣು
ನಿಶ್ಶಬ್ದದಲಿ ಕವಿ ಕುಳಿತಿದ್ದಾನೆ ಒಬ್ಬನೇ.

ಈ ಮಧ್ಯಾಹ್ನದ ಬಿಸಿಲಿಗೆ
ಬೋಧಿ ಮರದ
ನೆರಳಿನ ಕನವರಿಕೆ.

ಉದಯಿಸುತ್ತಿರುವ ಮಂಕಾದ
ಸೂರ್ಯ ಕಂಬದ ಮೇಲೆ
ಒಂಟಿ ಹಕ್ಕಿ ನೆನಪು.

ಅಂಗಳದ ಸರಿಗೆ ತುಂಬ
ಬಟ್ಟೆಗಳು
ಹಾರಾಡಿವೆ ಬಣ್ಣದ ಚಿಟ್ಟೆಗಳು.

ನೀಲಿ ಬಾನ ತುಂಬ ನಕ್ಷತ್ರಗಳು
ಅರಳಿವೆ ಸುಗಂಧಿ ಅಂಗಳದಲಿ
ಮಿನುಗಿವೆ ಅವಳ ಕಣ್ಣುಗಳು.

ನಿರಂತರ ಚಲನೆಯ ದಾರಿ
ಮೂಡಿದ ಹೆಜ್ಜೆ ಗುರುತುಗಳು
ಅಳಿಸಿವೆ ಅವನ ನೆನಪು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...