ಹಾಯ್ಕಗಳು

ಬೇಸಿಗೆಯ ಸಂಜೆ
ತಂಗಾಳಿ ಬೀಸಿತು
ತಂಪಿನಲಿ ಅವನ ಉಸಿರಿತ್ತು.

ರಾತ್ರಿಯಲಿ ಆಕಾಶದ
ತುಂಬ ಬೆಳದಿಂಗಳು ಹರಡಿದೆ
ಅಂಗಳದಲಿ ಮಕ್ಕಳು ತುಂಬಿಕೊಂಡಿವೆ.

ಮುಂಜಾವಿನಲಿ
ಹನಿಹನಿ ಇಬ್ಬನಿ ಹಾಸಿವೆ
ನನ್ನಲ್ಲಿ ಕವಿತೆಯ ಜೀವ ಒಸರುತಿದೆ.

ಮಧ್ಯಾಹ್ನದಲಿ
ಒಂದು ಚಮಚ ನೀರು
ಭಾವಗಳನ್ನು ನಿಶ್ಶಬ್ದವಾಗಿಸುತ್ತಿದೆ.

ಓಣಿಯಲಿ ನಡುರಾತ್ರಿ
ಹೆಜ್ಜೆ ಸಪ್ಪಳಗಳು
ನಾಯಿಗಳು ತುಂಬ ಊಳಿಡುತ್ತವೆ.

ಮಗು ಗಲಗಲ ತೊದಲಿತು
ಎದೆಯಲಿ
ದೇವಸ್ಥಾನದ ಗಂಟೆಗಳು ಮೊಳಗಿದವು.

ಅಮವಾಸ್ಯೆಯ ನಂತರ
ಚಂದ್ರ ಹುಟ್ಟುತ್ತಾನೆ
ಕಲ್ಲು ಸಂದಿಯಿಂದ ಕಪ್ಪೆಗಳು ವಟಗುಟ್ಟುತ್ತವೆ.

ಚಿಟ್ಟೆ ಕೆಂಪು ದಾಸವಾಳದ
ಮೇಲೆ ಹಾರಾಡುತ್ತವೆ
ಸೂರ್ಯ ಕೆಂಪಾಗಿ ಉದಯಿಸುತ್ತಾನೆ.

ಮಾಗಿಯ ಚಳಿಯಲಿ
ಹೊದ್ದ ಕಂಬಳಿಯಿಂದ
ನೆನಪಿನ ಕಂಬಳಿ ಹುಳಗಳಿದ್ದವು.

ಚಳಿಗಾಲದ ಸಂಜೆ
ಗಾಳಿ ಸವರುತ್ತವೆ ಜೀವವ
ದೂರದಿಂದ ಉದುರುತ್ತದೆ ನೆರಳು

ಬೇಸಿಗೆಯಲಿ ಅಕಾಲಿಕ ಮಳೆ
ಮಣ್ಣವಾಸನೆಗೆ
ಎದೆಯ ಕನಸುಗಳು ಬಿರಿದವು.

ಸಮುದ್ರದ ದಂಡೆಯಲಿ
ಅಲೆಗಳು ಅಪ್ಪಳಿಸಿವೆ
ನಾನಿನ್ನು ಜೀವಂತವಾಗಿರುವೆ.

ಸಂಜೆ ಹೂವು ಗಿಡ
ಮುಲುಕಾಡಿ ಕಂಪಿಸಿವೆ
ಚಿಟ್ಟೆಭಾರ ಹೆಗಲಿಗೇರಿಸಿಕೊಂಡಿವೆ.

ಅವಳು ಬದುಕು ಬೇಡ ಅಂದಳು.
ಸಾಯಂಕಾಲ ದೇವರ ಮನೆ ನೀಲಾಂಜನದಲಿ
ಮಕ್ಕಳ ಕಣ್ಣುಗಳು ಮಿನುಗಿದವು.

ಈದ್ ಚಾಂದ ಹರಡಿವೆ ತಿಳಿ ಬೆಳದಿಂಗಳು
ಓಣಿಯಲಿ ಹಲಗೆಗಳು ಭಾರಿಸುತ್ತಲಿದೆ
ಬಣ್ಣದ ಹೋಳಿ ಮೃದುವಾಗಿ ಸಿಂಗರಿಸಿದೆ ಊರನು.

ಸಾವಿನ ಕರಿನೆರಳು ತಬ್ಬಿ
ತಲೆಯ ಕೂದಲೆಲ್ಲಾ ಬೋಳು
ವಸಂತನ ಆಗಮವಾಗಿದೆ ಹಸಿರು ಚಿಗುರುತ್ತದೆ.

ಬದುಕಿನ ಕೊನೆಯ ಕ್ಷಣಗಳು
ಸಾವು ತಬ್ಬಿದೆ ಎಷ್ಟೊಂದು
ಶಾಂತಿ ಹಿತಗಳು ಅರಳಿವೆ ಎದೆಯೊಳಗೆ.

ಆ ಪಕ್ಷಿಯ ಏಕಾಂತರ ಹಾಡು
ನೇವರಿಸುತ್ತದೆ ಅವಳ ಕೂದಲು
ಎಲ್ಲಾ ಕಣಿವೆಗಳು ಬೆಳಕು ಹರಡುತ್ತಿದೆ.

ವಸಂತ ಮತ್ತೆ ಬಂದಿದ್ದಾನೆ.
ಪುಟ್ಟ ಹುಲ್ಲುಗರಿಯ ಬೆನ್ನ ಮೇಲೆ
ಹನಿ ಇಬ್ಬನಿ ಕುಳಿತಿದೆ ಒಂದೇ.

ಮಳೆ ಬಿದ್ದು ಒದ್ದೆಯಾದ ಮಣ್ಣು
ಅರಳಿದವು ಕವಿತೆಯ ಕಣ್ಣು
ನಿಶ್ಶಬ್ದದಲಿ ಕವಿ ಕುಳಿತಿದ್ದಾನೆ ಒಬ್ಬನೇ.

ಈ ಮಧ್ಯಾಹ್ನದ ಬಿಸಿಲಿಗೆ
ಬೋಧಿ ಮರದ
ನೆರಳಿನ ಕನವರಿಕೆ.

ಉದಯಿಸುತ್ತಿರುವ ಮಂಕಾದ
ಸೂರ್ಯ ಕಂಬದ ಮೇಲೆ
ಒಂಟಿ ಹಕ್ಕಿ ನೆನಪು.

ಅಂಗಳದ ಸರಿಗೆ ತುಂಬ
ಬಟ್ಟೆಗಳು
ಹಾರಾಡಿವೆ ಬಣ್ಣದ ಚಿಟ್ಟೆಗಳು.

ನೀಲಿ ಬಾನ ತುಂಬ ನಕ್ಷತ್ರಗಳು
ಅರಳಿವೆ ಸುಗಂಧಿ ಅಂಗಳದಲಿ
ಮಿನುಗಿವೆ ಅವಳ ಕಣ್ಣುಗಳು.

ನಿರಂತರ ಚಲನೆಯ ದಾರಿ
ಮೂಡಿದ ಹೆಜ್ಜೆ ಗುರುತುಗಳು
ಅಳಿಸಿವೆ ಅವನ ನೆನಪು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲಗು ಮಲಗೆನ್ನೆದೆಯ ಮಂಟಪದ ಮೂರ್ತಿ
Next post ಪಯಣ

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…