Home / ಕವನ / ಹಾಯ್ಕು / ಹಾಯ್ಕಗಳು

ಹಾಯ್ಕಗಳು

ಬೇಸಿಗೆಯ ಸಂಜೆ
ತಂಗಾಳಿ ಬೀಸಿತು
ತಂಪಿನಲಿ ಅವನ ಉಸಿರಿತ್ತು.

ರಾತ್ರಿಯಲಿ ಆಕಾಶದ
ತುಂಬ ಬೆಳದಿಂಗಳು ಹರಡಿದೆ
ಅಂಗಳದಲಿ ಮಕ್ಕಳು ತುಂಬಿಕೊಂಡಿವೆ.

ಮುಂಜಾವಿನಲಿ
ಹನಿಹನಿ ಇಬ್ಬನಿ ಹಾಸಿವೆ
ನನ್ನಲ್ಲಿ ಕವಿತೆಯ ಜೀವ ಒಸರುತಿದೆ.

ಮಧ್ಯಾಹ್ನದಲಿ
ಒಂದು ಚಮಚ ನೀರು
ಭಾವಗಳನ್ನು ನಿಶ್ಶಬ್ದವಾಗಿಸುತ್ತಿದೆ.

ಓಣಿಯಲಿ ನಡುರಾತ್ರಿ
ಹೆಜ್ಜೆ ಸಪ್ಪಳಗಳು
ನಾಯಿಗಳು ತುಂಬ ಊಳಿಡುತ್ತವೆ.

ಮಗು ಗಲಗಲ ತೊದಲಿತು
ಎದೆಯಲಿ
ದೇವಸ್ಥಾನದ ಗಂಟೆಗಳು ಮೊಳಗಿದವು.

ಅಮವಾಸ್ಯೆಯ ನಂತರ
ಚಂದ್ರ ಹುಟ್ಟುತ್ತಾನೆ
ಕಲ್ಲು ಸಂದಿಯಿಂದ ಕಪ್ಪೆಗಳು ವಟಗುಟ್ಟುತ್ತವೆ.

ಚಿಟ್ಟೆ ಕೆಂಪು ದಾಸವಾಳದ
ಮೇಲೆ ಹಾರಾಡುತ್ತವೆ
ಸೂರ್ಯ ಕೆಂಪಾಗಿ ಉದಯಿಸುತ್ತಾನೆ.

ಮಾಗಿಯ ಚಳಿಯಲಿ
ಹೊದ್ದ ಕಂಬಳಿಯಿಂದ
ನೆನಪಿನ ಕಂಬಳಿ ಹುಳಗಳಿದ್ದವು.

ಚಳಿಗಾಲದ ಸಂಜೆ
ಗಾಳಿ ಸವರುತ್ತವೆ ಜೀವವ
ದೂರದಿಂದ ಉದುರುತ್ತದೆ ನೆರಳು

ಬೇಸಿಗೆಯಲಿ ಅಕಾಲಿಕ ಮಳೆ
ಮಣ್ಣವಾಸನೆಗೆ
ಎದೆಯ ಕನಸುಗಳು ಬಿರಿದವು.

ಸಮುದ್ರದ ದಂಡೆಯಲಿ
ಅಲೆಗಳು ಅಪ್ಪಳಿಸಿವೆ
ನಾನಿನ್ನು ಜೀವಂತವಾಗಿರುವೆ.

ಸಂಜೆ ಹೂವು ಗಿಡ
ಮುಲುಕಾಡಿ ಕಂಪಿಸಿವೆ
ಚಿಟ್ಟೆಭಾರ ಹೆಗಲಿಗೇರಿಸಿಕೊಂಡಿವೆ.

ಅವಳು ಬದುಕು ಬೇಡ ಅಂದಳು.
ಸಾಯಂಕಾಲ ದೇವರ ಮನೆ ನೀಲಾಂಜನದಲಿ
ಮಕ್ಕಳ ಕಣ್ಣುಗಳು ಮಿನುಗಿದವು.

ಈದ್ ಚಾಂದ ಹರಡಿವೆ ತಿಳಿ ಬೆಳದಿಂಗಳು
ಓಣಿಯಲಿ ಹಲಗೆಗಳು ಭಾರಿಸುತ್ತಲಿದೆ
ಬಣ್ಣದ ಹೋಳಿ ಮೃದುವಾಗಿ ಸಿಂಗರಿಸಿದೆ ಊರನು.

ಸಾವಿನ ಕರಿನೆರಳು ತಬ್ಬಿ
ತಲೆಯ ಕೂದಲೆಲ್ಲಾ ಬೋಳು
ವಸಂತನ ಆಗಮವಾಗಿದೆ ಹಸಿರು ಚಿಗುರುತ್ತದೆ.

ಬದುಕಿನ ಕೊನೆಯ ಕ್ಷಣಗಳು
ಸಾವು ತಬ್ಬಿದೆ ಎಷ್ಟೊಂದು
ಶಾಂತಿ ಹಿತಗಳು ಅರಳಿವೆ ಎದೆಯೊಳಗೆ.

ಆ ಪಕ್ಷಿಯ ಏಕಾಂತರ ಹಾಡು
ನೇವರಿಸುತ್ತದೆ ಅವಳ ಕೂದಲು
ಎಲ್ಲಾ ಕಣಿವೆಗಳು ಬೆಳಕು ಹರಡುತ್ತಿದೆ.

ವಸಂತ ಮತ್ತೆ ಬಂದಿದ್ದಾನೆ.
ಪುಟ್ಟ ಹುಲ್ಲುಗರಿಯ ಬೆನ್ನ ಮೇಲೆ
ಹನಿ ಇಬ್ಬನಿ ಕುಳಿತಿದೆ ಒಂದೇ.

ಮಳೆ ಬಿದ್ದು ಒದ್ದೆಯಾದ ಮಣ್ಣು
ಅರಳಿದವು ಕವಿತೆಯ ಕಣ್ಣು
ನಿಶ್ಶಬ್ದದಲಿ ಕವಿ ಕುಳಿತಿದ್ದಾನೆ ಒಬ್ಬನೇ.

ಈ ಮಧ್ಯಾಹ್ನದ ಬಿಸಿಲಿಗೆ
ಬೋಧಿ ಮರದ
ನೆರಳಿನ ಕನವರಿಕೆ.

ಉದಯಿಸುತ್ತಿರುವ ಮಂಕಾದ
ಸೂರ್ಯ ಕಂಬದ ಮೇಲೆ
ಒಂಟಿ ಹಕ್ಕಿ ನೆನಪು.

ಅಂಗಳದ ಸರಿಗೆ ತುಂಬ
ಬಟ್ಟೆಗಳು
ಹಾರಾಡಿವೆ ಬಣ್ಣದ ಚಿಟ್ಟೆಗಳು.

ನೀಲಿ ಬಾನ ತುಂಬ ನಕ್ಷತ್ರಗಳು
ಅರಳಿವೆ ಸುಗಂಧಿ ಅಂಗಳದಲಿ
ಮಿನುಗಿವೆ ಅವಳ ಕಣ್ಣುಗಳು.

ನಿರಂತರ ಚಲನೆಯ ದಾರಿ
ಮೂಡಿದ ಹೆಜ್ಜೆ ಗುರುತುಗಳು
ಅಳಿಸಿವೆ ಅವನ ನೆನಪು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...