ಮಳೆಯಲ್ಲಿ ಎಲ್ಲಬಾಗಿಲು ಹಾಕಿಕೊಂಡೋ
ಚಳಿಯಲ್ಲಿ ಬೆಚ್ಚನೆಯ ಶಾಲು ಹೊದ್ದುಕೊಂಡೋ
ಕವನಗಳು ಸುರಿಸುವಂತೆ
ಈ ಬೇಸಗೆಯೆ ಬಸಿಲಿನ
ಮುಂಜಾವು ಮುಸ್ಸಂಜೆಯಲ್ಲಿಯೂ
ನಾನೇ ನೀರೆರದು ಬೆಳೆಸಿದ ಮರಗಳ
ಸಾಲಿನಲ್ಲಿ ಕುಳಿತು.
ಅದರ ಮೇಲೆ ವರ್ಷ ವರ್ಷಗಳವರಗೆ
ಚಿಲಿಪಿಲಿಸಿದ ಹಕ್ಕಿಗಳ
ಚಳಿಯಲ್ಲಿ ಉದುರುವ ಎಲೆಗಳ
ಚೈತ್ರದಲ್ಲಿ ಚೈತ್ರಿಸುವ ಚಿಗುರುಗಳ
ವಸಂತದಲ್ಲಿ ಕಾಮನ ಬಿಲ್ಲಿನ ಚೂರು ಹೂಗಳಲ್ಲಿ
ಸ್ಪಂದಿಸುತ್ತ
ನಿನ್ನ ನೆರಳಲ್ಲಿ ಬೆಳೆದ ಹೂ ಮೊಗ್ಗುಗಳ
ಹುಲ್ಲು, ಮಂಜು ಮುಸುಕು ಕುರಿತು
ನನ್ನ ಹೃದಯದ ಮೂಲಕ ನಿನ್ನೊಂದಿಗೆ ಚರ್ಚಿಸಿ
ಏನೆಲ್ಲ ಬರೆಯಬೇಕೆಂದು
ದೂರದ ಊರಿನಿಂದ ಮರಳಿದ್ದೆ
ಆದರೆ ಆಗಲೇ –
ನಿಷ್ಕರುಣೆಯ ಬಲಿಷ್ಟ ಕೈಗಳು
ಸಲಗದಂತಾಗಿ ನಿನ್ನನ್ನು
ಶಸ್ತ್ರಿಸಿದ್ದು ಅಷ್ಟೇ ಅಲ್ಲ ಬುಲ್ಡೋಜರಿಸಿದ್ದು
ಅನಾಮಿಕ ಹಕ್ಕಿಗಳನ್ನು
ಮುಗಿಲಿನೇಕಾಂತವನ್ನು ಅನಾಥಿಸಿದ್ದು
ನೋಡಿ
ದಿಕ್ಕು ದಿಕ್ಕಿಗೆ ದಿಕ್ಕೆಟ್ಟು ಓಡುವ
ಹುಲ್ಲೆಯಂತೆ
ನನ್ನ ಗಂಟಲಾರಿ ಉಸಿರು ಸಿಕ್ಕು
ಕರಾಳದಿನ ಹೊತ್ತಿ
ಶೂನ್ಯಕ್ಕೇ ಏರಿಳಿದಂತಾಗಿದ್ದೆ
*****
Related Post
ಸಣ್ಣ ಕತೆ
-
ಮನೆ “ಮಗಳು” ಗರ್ಭಿಣಿಯಾದಾಗ
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
-
ಮಿಂಚು
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…