Home / ಕವನ / ಕವಿತೆ / ಮರ ಮತ್ತು ಹುಲ್ಲೆ

ಮರ ಮತ್ತು ಹುಲ್ಲೆ

ಮಳೆಯಲ್ಲಿ ಎಲ್ಲಬಾಗಿಲು ಹಾಕಿಕೊಂಡೋ
ಚಳಿಯಲ್ಲಿ ಬೆಚ್ಚನೆಯ ಶಾಲು ಹೊದ್ದುಕೊಂಡೋ
ಕವನಗಳು ಸುರಿಸುವಂತೆ
ಈ ಬೇಸಗೆಯೆ ಬಸಿಲಿನ
ಮುಂಜಾವು ಮುಸ್ಸಂಜೆಯಲ್ಲಿಯೂ
ನಾನೇ ನೀರೆರದು ಬೆಳೆಸಿದ ಮರಗಳ
ಸಾಲಿನಲ್ಲಿ ಕುಳಿತು.
ಅದರ ಮೇಲೆ ವರ್ಷ ವರ್ಷಗಳವರಗೆ
ಚಿಲಿಪಿಲಿಸಿದ ಹಕ್ಕಿಗಳ
ಚಳಿಯಲ್ಲಿ ಉದುರುವ ಎಲೆಗಳ
ಚೈತ್ರದಲ್ಲಿ ಚೈತ್ರಿಸುವ ಚಿಗುರುಗಳ
ವಸಂತದಲ್ಲಿ ಕಾಮನ ಬಿಲ್ಲಿನ ಚೂರು ಹೂಗಳಲ್ಲಿ
ಸ್ಪಂದಿಸುತ್ತ
ನಿನ್ನ ನೆರಳಲ್ಲಿ ಬೆಳೆದ ಹೂ ಮೊಗ್ಗುಗಳ
ಹುಲ್ಲು, ಮಂಜು ಮುಸುಕು ಕುರಿತು
ನನ್ನ ಹೃದಯದ ಮೂಲಕ ನಿನ್ನೊಂದಿಗೆ ಚರ್ಚಿಸಿ
ಏನೆಲ್ಲ ಬರೆಯಬೇಕೆಂದು
ದೂರದ ಊರಿನಿಂದ ಮರಳಿದ್ದೆ
ಆದರೆ ಆಗಲೇ –
ನಿಷ್ಕರುಣೆಯ ಬಲಿಷ್ಟ ಕೈಗಳು
ಸಲಗದಂತಾಗಿ ನಿನ್ನನ್ನು
ಶಸ್ತ್ರಿಸಿದ್ದು ಅಷ್ಟೇ ಅಲ್ಲ ಬುಲ್‌ಡೋಜರಿಸಿದ್ದು
ಅನಾಮಿಕ ಹಕ್ಕಿಗಳನ್ನು
ಮುಗಿಲಿನೇಕಾಂತವನ್ನು ಅನಾಥಿಸಿದ್ದು
ನೋಡಿ
ದಿಕ್ಕು ದಿಕ್ಕಿಗೆ ದಿಕ್ಕೆಟ್ಟು ಓಡುವ
ಹುಲ್ಲೆಯಂತೆ
ನನ್ನ ಗಂಟಲಾರಿ ಉಸಿರು ಸಿಕ್ಕು
ಕರಾಳದಿನ ಹೊತ್ತಿ
ಶೂನ್ಯಕ್ಕೇ ಏರಿಳಿದಂತಾಗಿದ್ದೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...