ಅಲ್ಲಮ

ನಡೆವ ದಾರಿಯಲಿ ಹೆಜ್ಜೆಗಳು
ಮೂಡಲಿಲ್ಲ ಅನುರಣಿಸಿತು ಸಪ್ಪಳ
ನಡೆವ ದಾರಿಯ ಇಕ್ಕೆಲಗಳಲಿ
ಬಯಲ ಬಿಂಬ ದಾರಿಗೆ ಇಂಬು
ಹುಡುಕಾಟದ ಬಯಲಿನಲಿ
ಖಾಲಿಯಲಿ ತುಂಬಿಕೊಂಡ ಹಸಿರು.

ಬೆಳಕಿಗಾಗಿ ಕಂದೀಲನ ಮರೆಮಾಚಿ
ದೇಹ ಹೊತ್ತವರ ಹರಿದಾಟ ಇರುಳ
ಮೆಲ್ಲಗೆ ಕಂಪ ಮರೆತು ಮಾಯೆ ಒಳಗೆ
ಇಳಿದ ಕಪ್ಪು ಕತ್ತಲ ತುಂಬ ನೀಲಿ
ಆಕಾಶದ ನಕ್ಷತ್ರಗಳ ಮಿನುಗು
ಕಣ್ಣ ತುಂಬ ಜಗದ ಬೆಳದಿಂಗಳು.

ಹರಿವ ಹೊಳೆ ನಿಂತ ಗುಡ್ಡ
ಒಂದಕ್ಕೊಂದು ಹೊಂದಿ ಚಿಗುರು
ಚಿಮ್ಮಿದ ಗಿಡ ಮರಗಳು ಕುಳಿತು
ಹಕ್ಕಿಗಳು ಹಾಡಿದವು ರಾಗಗಳ
ಕ್ರಮಿಸಿದ ಹೆಜ್ಜೆಗಳು ಹಗುರಾಗಿ
ಗಾಳಿ ಬೀಸಿತು ತಂಪಾದ ಜಂಗಮ.

ಎಲ್ಲದರೊಳಗೆ ಇಲ್ಲವಾಗಿ ಕರಗಿ
ಇದ್ದುದರೊಳಗೆ ಶೂನ್ಯ ತುಂಬಿ
ಪಂಚಭೂತಗಳು ತೆರೆದ ಬಾಗಿಲು
ಕಿಟಕಿ, ಅಂಗಳದ ತುಂಬ ಮೌನ
ನಡೆದ ನಡುಗೆ ಕಲ್ಯಾಣದಿಂದ ಕದಳಿಗೆ
ಎಲ್ಲೆಲ್ಲೂ ಪಸರಿಸಿತು ಜ್ಞಾನ ಹೂವು, ಗಾಳಿ, ಗಂಧ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೀವನದ ರೂಪನ್ನೆ ಬದಲಿಸುವ, ಬಾ!
Next post ಅಂತರ್ದರ್ಶನ

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…