Home / ಕವನ / ಕವಿತೆ / ನೆರೆ

ನೆರೆ

ಮೊನ್ನೆ ಸುರಿದ ಭಾರಿ ಮಳೆಗೆ
ಮನೆ-ಮನೆಗಳು ಒಡೆದು
ಬಯಲು ಆಲಯವಾಯ್ತು
ಸುತ್ತಿ ಸುಳಿದು ತಿರುಗಿದ ಇತಿಹಾಸ
ಗಿರಿಗಿಟ್ಟಿಯಾಗಿ ಆಕಾಶ ನದಿ ಹಳ್ಳ
ಕೊಳ್ಳಗಳು ವಿಕಾರಗಳಾದವು.

ಅನ್ನ, ಹಸಿವು ನೀರು ನೀರಡಿಕೆ
ಕರುಳಿಗೆ ಅಂಟಿಕೊಂಡ ಮಕ್ಕಳು
ದಿಕ್ಕು ದಿಸೆಯಿಲ್ಲದ ಅಲೆಮಾರಿ ಬದುಕು
ಹರಿದ ನೀರಿಗೆ ನಿದ್ದೆಬಾರದೇ
ಹೊರಳಾಡಿದ ರಾತ್ರಿಗಳು ಚಿಂದಿ
ಮನಸ್ಸುಗಳು ತೋಯ್ದು ತಪ್ಪಡಿ ಮುದ್ದೆಯಾಯಿತು.

ಸ್ಮಶಾನದ ಸಂಜೆ ಕೆಟ್ಟ ಗಾಳಿ ಬೀಸಿ
ಚಳಿಗೆ ಥರಗುಟ್ಟಿವೆ ಕೂಸು ಕುನ್ನಿಗಳು
ಕಣ್ಣ ತುಂಬ ಕಂಬನಿ ಹೊತ್ತ ಜೀವ ಭಯ
ಸಾವಿಗೆ ಹೆದರಿದ ಮೂಕ ಮರ್ಮರ
ವಿಶಾಲ ಬಯಲಿನ ತುಂಬ ಹೆರಿಗೆ ಮನೆ
ನೋವು ಸಂಕಟಗಳು ಹರಿಕೊಂಡವು.

ಬಾಡಿಗೆಗೆ ಮನೆಮಠವಿಲ್ಲ ಶಾಲೆಗಳಿಲ್ಲ
ಕರ್ಫೂ ತುಂಬಿದ ದಿನಗಳು ಚಾಕರಿಗೆ
ಬೇಕಿಲ್ಲ ಗಂಜೀ ಕುದಿಸಲು ಕಟ್ಟಿಗೆ ಇಲ್ಲ
ಹೊದೆಯಲು ವಸ್ತ್ರವಿಲ್ಲ, ಹುಣ್ಣುಗಳ
ಗಾಯಕ್ಕೆ ಮುಲಾಮು ಸವರುವವರ್‍ಯಾರು
ಪ್ರಜಾಪ್ರಭುತ್ವಕ್ಕೆ ಬೇಗ ಪ್ರಾರ್ಥನೆಯ ಭಾಷೆ ತಿಳಿಯುವುದಿಲ್ಲ.

ನೀರಲಿ ತೇಲಿದ ಮನೆ ಮಠ ಗುಡಿ
ಬಟ್ಟೆಯೇ ಹೊದಿಸದ ಹೆಣಗಳು
ಅರ್ಧ ದಾರಿಯಲಿ ಬಿಟ್ಟು ಹೋದವರ ಗೋಳು
ಮನೆ ಗೂಡಿ ಮುರಿದು ಬಿದ್ದಿವೆ ಹಕ್ಕಿಗಳು
ಹಸಿರು ಕಾಣದೇ ಎತ್ತಲೋ ಹಾರಿ ಹೋಗಿವೆ
ಮೋಡಗಳು ಕಣ್ಣೀರು ಸುರಿಸುವುದ ನಿಲ್ಲಿಸಲಿ
ನಾವು ಮಾಡಿದ ತಪ್ಪುಗಳಿಗೆ ಪಶ್ಚಾತ್ತಾಪ ಪಡೋಣ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...