ನೆರೆ

ಮೊನ್ನೆ ಸುರಿದ ಭಾರಿ ಮಳೆಗೆ
ಮನೆ-ಮನೆಗಳು ಒಡೆದು
ಬಯಲು ಆಲಯವಾಯ್ತು
ಸುತ್ತಿ ಸುಳಿದು ತಿರುಗಿದ ಇತಿಹಾಸ
ಗಿರಿಗಿಟ್ಟಿಯಾಗಿ ಆಕಾಶ ನದಿ ಹಳ್ಳ
ಕೊಳ್ಳಗಳು ವಿಕಾರಗಳಾದವು.

ಅನ್ನ, ಹಸಿವು ನೀರು ನೀರಡಿಕೆ
ಕರುಳಿಗೆ ಅಂಟಿಕೊಂಡ ಮಕ್ಕಳು
ದಿಕ್ಕು ದಿಸೆಯಿಲ್ಲದ ಅಲೆಮಾರಿ ಬದುಕು
ಹರಿದ ನೀರಿಗೆ ನಿದ್ದೆಬಾರದೇ
ಹೊರಳಾಡಿದ ರಾತ್ರಿಗಳು ಚಿಂದಿ
ಮನಸ್ಸುಗಳು ತೋಯ್ದು ತಪ್ಪಡಿ ಮುದ್ದೆಯಾಯಿತು.

ಸ್ಮಶಾನದ ಸಂಜೆ ಕೆಟ್ಟ ಗಾಳಿ ಬೀಸಿ
ಚಳಿಗೆ ಥರಗುಟ್ಟಿವೆ ಕೂಸು ಕುನ್ನಿಗಳು
ಕಣ್ಣ ತುಂಬ ಕಂಬನಿ ಹೊತ್ತ ಜೀವ ಭಯ
ಸಾವಿಗೆ ಹೆದರಿದ ಮೂಕ ಮರ್ಮರ
ವಿಶಾಲ ಬಯಲಿನ ತುಂಬ ಹೆರಿಗೆ ಮನೆ
ನೋವು ಸಂಕಟಗಳು ಹರಿಕೊಂಡವು.

ಬಾಡಿಗೆಗೆ ಮನೆಮಠವಿಲ್ಲ ಶಾಲೆಗಳಿಲ್ಲ
ಕರ್ಫೂ ತುಂಬಿದ ದಿನಗಳು ಚಾಕರಿಗೆ
ಬೇಕಿಲ್ಲ ಗಂಜೀ ಕುದಿಸಲು ಕಟ್ಟಿಗೆ ಇಲ್ಲ
ಹೊದೆಯಲು ವಸ್ತ್ರವಿಲ್ಲ, ಹುಣ್ಣುಗಳ
ಗಾಯಕ್ಕೆ ಮುಲಾಮು ಸವರುವವರ್‍ಯಾರು
ಪ್ರಜಾಪ್ರಭುತ್ವಕ್ಕೆ ಬೇಗ ಪ್ರಾರ್ಥನೆಯ ಭಾಷೆ ತಿಳಿಯುವುದಿಲ್ಲ.

ನೀರಲಿ ತೇಲಿದ ಮನೆ ಮಠ ಗುಡಿ
ಬಟ್ಟೆಯೇ ಹೊದಿಸದ ಹೆಣಗಳು
ಅರ್ಧ ದಾರಿಯಲಿ ಬಿಟ್ಟು ಹೋದವರ ಗೋಳು
ಮನೆ ಗೂಡಿ ಮುರಿದು ಬಿದ್ದಿವೆ ಹಕ್ಕಿಗಳು
ಹಸಿರು ಕಾಣದೇ ಎತ್ತಲೋ ಹಾರಿ ಹೋಗಿವೆ
ಮೋಡಗಳು ಕಣ್ಣೀರು ಸುರಿಸುವುದ ನಿಲ್ಲಿಸಲಿ
ನಾವು ಮಾಡಿದ ತಪ್ಪುಗಳಿಗೆ ಪಶ್ಚಾತ್ತಾಪ ಪಡೋಣ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಸುಬೆಳಕಲಿ ಮುತ್ತಿತು ಚಂದ್ರನ ರಾಹು
Next post ಕಾಲ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…