Home / ಕವನ / ಕವಿತೆ / ನೆರೆ

ನೆರೆ

ಮೊನ್ನೆ ಸುರಿದ ಭಾರಿ ಮಳೆಗೆ
ಮನೆ-ಮನೆಗಳು ಒಡೆದು
ಬಯಲು ಆಲಯವಾಯ್ತು
ಸುತ್ತಿ ಸುಳಿದು ತಿರುಗಿದ ಇತಿಹಾಸ
ಗಿರಿಗಿಟ್ಟಿಯಾಗಿ ಆಕಾಶ ನದಿ ಹಳ್ಳ
ಕೊಳ್ಳಗಳು ವಿಕಾರಗಳಾದವು.

ಅನ್ನ, ಹಸಿವು ನೀರು ನೀರಡಿಕೆ
ಕರುಳಿಗೆ ಅಂಟಿಕೊಂಡ ಮಕ್ಕಳು
ದಿಕ್ಕು ದಿಸೆಯಿಲ್ಲದ ಅಲೆಮಾರಿ ಬದುಕು
ಹರಿದ ನೀರಿಗೆ ನಿದ್ದೆಬಾರದೇ
ಹೊರಳಾಡಿದ ರಾತ್ರಿಗಳು ಚಿಂದಿ
ಮನಸ್ಸುಗಳು ತೋಯ್ದು ತಪ್ಪಡಿ ಮುದ್ದೆಯಾಯಿತು.

ಸ್ಮಶಾನದ ಸಂಜೆ ಕೆಟ್ಟ ಗಾಳಿ ಬೀಸಿ
ಚಳಿಗೆ ಥರಗುಟ್ಟಿವೆ ಕೂಸು ಕುನ್ನಿಗಳು
ಕಣ್ಣ ತುಂಬ ಕಂಬನಿ ಹೊತ್ತ ಜೀವ ಭಯ
ಸಾವಿಗೆ ಹೆದರಿದ ಮೂಕ ಮರ್ಮರ
ವಿಶಾಲ ಬಯಲಿನ ತುಂಬ ಹೆರಿಗೆ ಮನೆ
ನೋವು ಸಂಕಟಗಳು ಹರಿಕೊಂಡವು.

ಬಾಡಿಗೆಗೆ ಮನೆಮಠವಿಲ್ಲ ಶಾಲೆಗಳಿಲ್ಲ
ಕರ್ಫೂ ತುಂಬಿದ ದಿನಗಳು ಚಾಕರಿಗೆ
ಬೇಕಿಲ್ಲ ಗಂಜೀ ಕುದಿಸಲು ಕಟ್ಟಿಗೆ ಇಲ್ಲ
ಹೊದೆಯಲು ವಸ್ತ್ರವಿಲ್ಲ, ಹುಣ್ಣುಗಳ
ಗಾಯಕ್ಕೆ ಮುಲಾಮು ಸವರುವವರ್‍ಯಾರು
ಪ್ರಜಾಪ್ರಭುತ್ವಕ್ಕೆ ಬೇಗ ಪ್ರಾರ್ಥನೆಯ ಭಾಷೆ ತಿಳಿಯುವುದಿಲ್ಲ.

ನೀರಲಿ ತೇಲಿದ ಮನೆ ಮಠ ಗುಡಿ
ಬಟ್ಟೆಯೇ ಹೊದಿಸದ ಹೆಣಗಳು
ಅರ್ಧ ದಾರಿಯಲಿ ಬಿಟ್ಟು ಹೋದವರ ಗೋಳು
ಮನೆ ಗೂಡಿ ಮುರಿದು ಬಿದ್ದಿವೆ ಹಕ್ಕಿಗಳು
ಹಸಿರು ಕಾಣದೇ ಎತ್ತಲೋ ಹಾರಿ ಹೋಗಿವೆ
ಮೋಡಗಳು ಕಣ್ಣೀರು ಸುರಿಸುವುದ ನಿಲ್ಲಿಸಲಿ
ನಾವು ಮಾಡಿದ ತಪ್ಪುಗಳಿಗೆ ಪಶ್ಚಾತ್ತಾಪ ಪಡೋಣ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...