ಶ್ರೀ ಗುರುವಿಗೆ

ಅಂಧಕಾರದ ಭ್ರಾಂತಿ ಕಳೆಯಿಸೊ
ಪ್ರಭೆಯೆ ನಿನಗೆ ವಂದನೆ,
ಅಂತರಂಗದ ಹಣತೆ ಸೊಗಯಿಸೊ
ಗುರುವೆ ನಿನಗೆ ವಂದನೆ |

ಧಾತ ವಿಧಾತ ನಾಥನ
ತೋರೋ ಕೈಯ ದೀವಿಗೆ
ಭೂತ ಭವಿಷ್ಯದ್ವರ್ತಮಾನ
ನಿನ್ನ ಹಿರಿಮೆಗರಿಮೆ ಸಾಕ್ಷಿಗೆ |

ಮಾತೃ ಮಮತೆ ಪಿತೃ ನಿಯತಿ
ಭ್ರಾತೃನೇಹದ ಚಂದನ,
ಶಿಸ್ತು ಸಂಯಮ ದಯಾ ಕ್ಷಮತಾ
ಶೀಲವಂತಿಕೆ ಚೇತನ |

ಕ್ಷಾತ್ರ ತೇಜದ ಕ್ಷ-ಕಿರಣವು
ಹೊಳಹು ಹೊಳಪಿನ ಕಾಂತಿಗೆ
ದೀಪ ದೀಪದಿಂದೆನಿತೊ ದೀಪವ
ದೀಪಿಸೋ ದೀಪಕ ಶಕುತಿಗೆ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೂರದೊಂದು ತೀರದಿಂದ
Next post ಮೋಡಗಳ ಹೆಜ್ಜೆ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…