Home / ಕವನ / ಕವಿತೆ / ಮಧುಚಂದ್ರ

ಮಧುಚಂದ್ರ

ಪಡುವಲದೊಡೆಯ ಪೂರ್ಣಿಮೆಯಿನಿಯ
ಬೆಳಗಽನ್ನು ಸುಯ್ದಾ,
ಬೆಳ್ಳಿಯ ಬೆಳಗನ್ನು ಸುಯ್ದಾ,
ಬಾನಲಿ ಮೊಳೆದು ಮೆಲ್ಲಗೆ ಬೆಳೆದು
ಇಳೆಯಲ್ಲಾ ಕಾಣ್ದಾಽ
ಪೂರ್ಣಿ ಇಳೆಯಲ್ಲಾ ಕಾಣ್ದಾ

ಅಮೃತದ ರಸದಾ ಚಿಲುಮೆಯಿಂದಽ
ಭರಭರನೇ ಸುರಿದು
ತಾನೇ ಭರ ಭರನೇ ಸುರಿದು
ಧಗ ಧಗಿಸಿರುವ ಧರಿಣಿಗೆ ತಂಪ
ಸರ ಸರನೇ ತರುವಽ
ತಾನೇ ಸರ ಸರನೇ ತರುವಾಽ

ಗಿರಿಗಳ ಮೇಲೆ ಕಾನನದೊಳಗೆ
ಶೃಂಗಾರದ ಹಾಸು,
ಕಂಡಿತು ಶೃಂಗಾರದ ಹಾಸು,
ಹಾಸಿರುವವರಾರು ಬಾನೆತ್ತರದಿಂ
ದಿಲ್ಲಿಗೇ ತಂದುಽ
ಈಗ ಇಲ್ಲಿಗೇ ತಂಧೂಽ

ಕಾಮನೆ ಬಯಕೆಯ ಮನದಲಿ ತರುವ
ವಿರಹದ ಬೇಗೆಯನುಽ
ತನುವಲಿ ವಿರಹದ ಬೇಗೆಯನು
ಪ್ರಣಯಿಗಳಿಗೆ ಉನ್ಮಾದವ ತರುವ
ತಂಬೆಳಕಿನ ಮಾಲೆ
ಮಿಲನದ ತಂಬೆಳಕಿನ ಮಾಲೆ

ಕಾಡಿನ ಮಧ್ಯದ ಸೆರಗೊಳಗಿಂದ
ಖಗ ಮಿಗದಽ ನಲಿವುಽ
ಕೇಳಿತು ಖಗಮೃಗದಾ ನಲಿವು
ಜೀವ ಸಂಕುಲಗಳ ಚಂದದ ಉಲಿವು
ಮಧು ಚಂದ್ರದ ಹಾಡು
ಹಾಡಿತು ಮಧು ಚಂದ್ರದ ಹಾಡು |

ಕಲೆತವು ತನುವುಽ ಬೆರೆತವು ಮನವುಽ
ಮರೆಸೀತುಽ ಇರವುಽ
ಸುಖದಲಿಽ ಮರೆಸೀತು ಇರವು
ಚಂದನ ಪರಿಮಳ ಹರಡುತ ಬಂತು
ತಂಗಾಳಿಯುಽ ಜೊತೆಗೆ
ಹರ್ಷದ ತಂಗಾಳಿಯು ಜೊತೆಗೆ |

ನಾಚಿದ ನಾಚಿಕೆ ದೂರ ಸರಿಯಿತು
ರತಿ ಮನ್ಮಥರಽಮಿಲನ
ಶೃಂಗಾರದ ಶಿವ-ಶಿವೆಯರಽ ಮಿಲನ
ಪ್ರೇಮ ಜಲಧಿಯ ತೆರೆಯಬ್ಬರದಿ
ಗೇಹ-ದೇಹದ ಸಮ್ಮಿಲನ
ಮರು ಹುಟ್ಟಿನ ಜೋಗುಳ ತೋಂ… ತನನನ… |
(ವರಕವಿ ಬೇಂದ್ರೆಯವರ ಮೂಡಲ ಮನೆಯಾಽ…. ಕವಿತೆಗೆ ಗೌರವದಿಂದ)
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...