Home / ಕವನ / ಕವಿತೆ / ನಿವೇದನೆ

ನಿವೇದನೆ

ಕಾರುಣ್ಯದಾ ಬೆಳಕೆ ಬಾ ಬೇಗ ಬಾ
ನನ್ನೆದೆಯ ಬಾಂದಳವ ಬೆಳಗಿಸಲು ಬಾ
ನಿನ್ನಲ್ಲಿ ಆನಿಂದು ಬೇಡಿಕೊಳ್ಳುವೆ ನಿನ್ನು
ಕೃಪೆಯಿಟ್ಟು ಆಲಿಸೆನ್ನೀ ಮೊರೆಯನ್ನು

ಮುಗಿಲಗಲ ಜಗಕೆಲ್ಲ
ರಸವೃಷ್ಟಿ ಸುರಿಸು,
ರವಿ ಶಶಿ ತಾರಾಹೊಳಪನ್ನು
ನಮ್ಮ ಕಣ್ಣುಗಳೊಳಗಿರಿಸು,

ಮೇದಿನಿಯ ಕಣ ಕಣದಲ್ಲೂ
ಫಲ ಫಲದೆನೆಯ ನಿರಿಸು,
ಜೀವ, ಜೀವ ಸಂಕುಲಕೆಲ್ಲ
ಉಲ್ಲಸದ ನೆಮ್ಮದಿಯ ಹರಸು,

ನದಿ ನದದ ಜುಳ ಜುಳದ
ಸಿರಿ ಬತ್ತದಂತಿರಿಸು,
ಅಂಬುಧಿಯ ಸಡಗರವ
ಜೀವಿತದಿ ಬೆರೆಸು,

ಪ್ರಾಣ ವಾಯುವಿನಲೆಯಲ್ಲಿ
ಸಂಜೀವಿನಿಯನಿರಿಸು
ಸುಮಸುಮದ ನಂದನದ
ಚೆಲ್ವ ಬಾಳ್ವೆಯಲಿ ಬೆರೆಸು

ಹಾರೋಹಕ್ಕಿಯ ಪಂಜರದ
ಪಾರತಂತ್ರ್‍ಯ ಧಿಕ್ಕರಿಸು
ಜಗದ ಜನಮನಕೆಲ್ಲ ಮುದದ
ಸ್ವಾತಂತ್ರ್‍ಯ ಕೊಡಿಸು

ಕ್ರೂರ ಕ್ರೌರ್ಯ ಮೃಗದ ರಣ
ದ್ವೇಷವನು ದಹಿಸು,
ಪ್ರೀತಿ ವಾತ್ಸಲ್ಯ ನೇಹ ಸಗ್ಗವನು
ಬಿತ್ತಿ ಬೆಳೆಸುತಾ ಬೆಸೆಸು.

ದುರಾಸೆಯಾಸೆಗಳಗ್ಗಳದ
ಕುತಂತ್ರವನೆ ಕೆಡಿಸು,
ಶ್ರಮದ ಅನ್ನವ ಸಮದಿ
ಉಣ್ಣುವುದ ತಿಳಿಸು.

ಶಸ್ತ್ರ ಶಾಸ್ತ್ರದ ಭಯದ
ಭೀತಿಯನು ಬಿಡಿಸು,
ವರ್ಣ ವರ್ಣದ ವರ್ಗ
ಕ್ಷುದ್ರತೆಯ ನಳಿಸು

ರಂಗು ರಂಗಿನರಂಗು
ಬೆಳ್ಮುಗಿಲ ರಂಗಿನ ಸೊಗಸು
ಭಿನ್ನ ಭಿನ್ನದ ಜನದ
ದೇಹ-ಗೇಹ ಒಂದೆಂದು ತಿಳಿಸು

ಆ ಧರ್ಮ ಈ ಧರ್ಮ ಕರ್ಮ
ಮೌಢ್ಯ ನಿಯತಿಗಳನಳಿಸು
ಈ ವಿಶ್ವ ವೀದೇಶ ನಾಡು ನುಡಿ
ನಿಜ ಧರ್ಮ ಸಾರ ತಿಳಿಸು

ಮತ ಪಥದ ಕುಲ ಕುಲದ
ಹುಚ್ಚು ಸಹವಾಸ ಬಿಡಿಸು
ಮಾನವತೆಯರಿವರಿವು
ನೆಚ್ಚಿ ಬದುಕಲೋಲೈಸು

ಗುಡಿ ಚರ್ಚು ಮಸೀದಿ ಬಸದಿಗಳ
ಕಟ್ಟುವುದ ಬಿಡಿಸು
ನಮ್ಮ ನಿಮ್ಮಯ ನಿಜ ತಿಳಿವು
ದೇವರಿರವೆಂದು ಕಲಿಸು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ