Home / ಕವನ / ಕವಿತೆ / ನಿವೇದನೆ

ನಿವೇದನೆ

ಕಾರುಣ್ಯದಾ ಬೆಳಕೆ ಬಾ ಬೇಗ ಬಾ
ನನ್ನೆದೆಯ ಬಾಂದಳವ ಬೆಳಗಿಸಲು ಬಾ
ನಿನ್ನಲ್ಲಿ ಆನಿಂದು ಬೇಡಿಕೊಳ್ಳುವೆ ನಿನ್ನು
ಕೃಪೆಯಿಟ್ಟು ಆಲಿಸೆನ್ನೀ ಮೊರೆಯನ್ನು

ಮುಗಿಲಗಲ ಜಗಕೆಲ್ಲ
ರಸವೃಷ್ಟಿ ಸುರಿಸು,
ರವಿ ಶಶಿ ತಾರಾಹೊಳಪನ್ನು
ನಮ್ಮ ಕಣ್ಣುಗಳೊಳಗಿರಿಸು,

ಮೇದಿನಿಯ ಕಣ ಕಣದಲ್ಲೂ
ಫಲ ಫಲದೆನೆಯ ನಿರಿಸು,
ಜೀವ, ಜೀವ ಸಂಕುಲಕೆಲ್ಲ
ಉಲ್ಲಸದ ನೆಮ್ಮದಿಯ ಹರಸು,

ನದಿ ನದದ ಜುಳ ಜುಳದ
ಸಿರಿ ಬತ್ತದಂತಿರಿಸು,
ಅಂಬುಧಿಯ ಸಡಗರವ
ಜೀವಿತದಿ ಬೆರೆಸು,

ಪ್ರಾಣ ವಾಯುವಿನಲೆಯಲ್ಲಿ
ಸಂಜೀವಿನಿಯನಿರಿಸು
ಸುಮಸುಮದ ನಂದನದ
ಚೆಲ್ವ ಬಾಳ್ವೆಯಲಿ ಬೆರೆಸು

ಹಾರೋಹಕ್ಕಿಯ ಪಂಜರದ
ಪಾರತಂತ್ರ್‍ಯ ಧಿಕ್ಕರಿಸು
ಜಗದ ಜನಮನಕೆಲ್ಲ ಮುದದ
ಸ್ವಾತಂತ್ರ್‍ಯ ಕೊಡಿಸು

ಕ್ರೂರ ಕ್ರೌರ್ಯ ಮೃಗದ ರಣ
ದ್ವೇಷವನು ದಹಿಸು,
ಪ್ರೀತಿ ವಾತ್ಸಲ್ಯ ನೇಹ ಸಗ್ಗವನು
ಬಿತ್ತಿ ಬೆಳೆಸುತಾ ಬೆಸೆಸು.

ದುರಾಸೆಯಾಸೆಗಳಗ್ಗಳದ
ಕುತಂತ್ರವನೆ ಕೆಡಿಸು,
ಶ್ರಮದ ಅನ್ನವ ಸಮದಿ
ಉಣ್ಣುವುದ ತಿಳಿಸು.

ಶಸ್ತ್ರ ಶಾಸ್ತ್ರದ ಭಯದ
ಭೀತಿಯನು ಬಿಡಿಸು,
ವರ್ಣ ವರ್ಣದ ವರ್ಗ
ಕ್ಷುದ್ರತೆಯ ನಳಿಸು

ರಂಗು ರಂಗಿನರಂಗು
ಬೆಳ್ಮುಗಿಲ ರಂಗಿನ ಸೊಗಸು
ಭಿನ್ನ ಭಿನ್ನದ ಜನದ
ದೇಹ-ಗೇಹ ಒಂದೆಂದು ತಿಳಿಸು

ಆ ಧರ್ಮ ಈ ಧರ್ಮ ಕರ್ಮ
ಮೌಢ್ಯ ನಿಯತಿಗಳನಳಿಸು
ಈ ವಿಶ್ವ ವೀದೇಶ ನಾಡು ನುಡಿ
ನಿಜ ಧರ್ಮ ಸಾರ ತಿಳಿಸು

ಮತ ಪಥದ ಕುಲ ಕುಲದ
ಹುಚ್ಚು ಸಹವಾಸ ಬಿಡಿಸು
ಮಾನವತೆಯರಿವರಿವು
ನೆಚ್ಚಿ ಬದುಕಲೋಲೈಸು

ಗುಡಿ ಚರ್ಚು ಮಸೀದಿ ಬಸದಿಗಳ
ಕಟ್ಟುವುದ ಬಿಡಿಸು
ನಮ್ಮ ನಿಮ್ಮಯ ನಿಜ ತಿಳಿವು
ದೇವರಿರವೆಂದು ಕಲಿಸು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...