Home / ಕವನ / ಕವಿತೆ / ಬನ್ನಿ ಕನಸುಗಳೆ ಬನ್ನಿ

ಬನ್ನಿ ಕನಸುಗಳೆ ಬನ್ನಿ

ಬನ್ನಿ ಕನಸುಗಳೆ ಬನ್ನಿ
ಬಾಳ ಬುತ್ತಿಗೆ ಭರವಸೆಯ ಹೊತ್ತು ತನ್ನಿ |

ಮಣ್ಣಿನಲಿ ದಿನಕಟ್ಟೋ
ಮಣ್ಣಣುಗರನು ಸಂತೈಸ ಬನ್ನಿ
ಮಣ್ಣಲ್ಲಿ ಮಣ್ಣಾಗೋ
ಎಚ್ಚರ ತೊರದವರೆಬ್ಬಿಸಿ ಕರೆದು ತನ್ನಿ |

ದುಡಿ-ದುಡಿದು ದಣಿ-ದಣಿವ
ತನುಮನವನೋಲೈಸಲು ಬನ್ನಿ
ಸುಲಿ-ಸುಲಿದು ಕೂಡಿಡುವ
ಮನವ ಕರಗಿಸಿ ಮುದದಿ ಹಿಡಿದು ತನ್ನಿ

ಅಲೆದಲೆದು ಹಣ್ಣಾಗೋ
ಅಲೆಮಾರಿಯಾ ಕೈ ಹಿಡಿದು ಬನ್ನಿ
ಒಲಿದೊಲಿದು ನಗೆಬೀರೊ
ಬೆಸುಗೆ ಸೊಗಸನು ಮನದುಂಬಿ ಕರೆದು ತನ್ನಿ

ಉಸಿರ್‍ಹುಸಿರ ಹಸಿರ ಝರಿ
ತೊರೆ ಜಿನುಗ ಝೀಕಿಸ ಬನ್ನಿ
ಮರಳ್ನೆಲದ ಕೂಪದೊಳು
ಚಿಲುಮೆ ಚಿನ್ಮನ ಬಾಳ್ಚೆಲುವ ತನ್ನಿ

ತಂತ್ರಯುಗದತಂತ್ರಗಳ
ಭೀತಿ ದೂರವಿಡ ಲೋಡೋಡಿ ಬನ್ನಿ
ಶಾಂತ-ಶಮ-ಕ್ಷಮತೆಯ
ಬಾನ್ ಬೆಳಕ ಸ್ಪುರಿಸೋ ನಿಯತಿ ತನ್ನಿ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...