ಅಮೃತ ತರಂಗಿಣಿ

ಯಾವ ರಾಗ ಪಲ್ಲವಿಯ ಪದದನುಪದದನುನಯ
ಸರ ಸ್ವರದಮೃತ ಮಾನಸದನುಲಾಪದದನಾಲಯ |

ಋತು ಋತುವಿನ ಕ್ರತುವು ನೀನು,
ಬಾಳಿನೆಳೆಯ ತಂಬೆಲರವು,
ಪಥ ಪಂಥ ಪಾಂಥದ ಪಥವು ನೀನು,
ಬೆಳಗು ಬೆಳಕಿನ ಕಿರಣವು.

ನನ್ನ ಜಲಧಿಯ ತುಂಬು ಬಿಂಬವು
ನಿನ್ನ ಚಿಲುಮೆ ಬಿಂದು ಕಸವರ,
ಒಲವೊಲವಗಣ್ಣಿನ ಕನಸಬಿಂಬವು
ನಿನ್ನ ಸುಮದಧರದ ಕೇಸರ,

ನನ್ನ ಮೆತ್ತೆಯ ಮೃದು ಮೋದ ತಲ್ಪವು
ನಿನ್ನ ಕುಂಭದೆದೆಯ ತುಂಬುರ,
ಪ್ರಾಣ-ಹರಣದ ಭಾವ ಕಲ್ಪವು
ನಿನ್ನ ರತ್ನ ಗರ್ಭದ ಹಂದರ,

ಕ್ಷೀರ ದಧಿಘೃತ ಮಧು ಸವಿಯು ನೀನು
ಇಂದ್ರಿಯೊಳಿಂದ್ರಿಯದಾನಂದವು,
ಅನಂತ ತಾನನಂತದೈಸಿರಿ
ಋಷಿಗಡಣದಮರರೊಲಿಸಿದ ಶಕುತಿಯು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೂಪಾಂತರ
Next post ಆಕಾಶದಲ್ಲಲ್ಲಿ ನಿಲ್ದಾಣಗಳಿದ್ದಿದ್ದರೆ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

cheap jordans|wholesale air max|wholesale jordans|wholesale jewelry|wholesale jerseys