ಬಸನಿಂಗನ ಮಾತು ಕೇಳಿ

“ಹೌದಲ್ಲ! ಪುಸ್ತಕಕ್ಕೆ ಗೆದ್ದಲ ಹತ್ಯಾಽವು
ಕನ್ನಡ ಬರೆಯೋದು ಓದೋಽದು ಮಾಡೋದಿಲ್ಲ ನೀವು
ಇಂಗ್ಲಿಷ್ ಪುಸ್ತಕ ಪತ್ರಿಕೆ
ಮನಿ ತುಂಬ ಹರಿವಿದ್ದೀರಲ್ಲ!
ನೀವು ಇಂಗ್ಲೀಷಿನವರ
ಸಂಬಂಧಿಕರೇಽನು ಮತ್ತಽ?
ಆರೇ ನಿಮ್ಮ ಟಿ.ವಿ. ಹೊಳ್ಯಾಕತ್ತತ್ಯಲ್ಲ ಎಷ್ಟ.
ಬಿಳಿ ಮಂದಿನ್ನಷ್ಟಽ ನೋಡ್ತಿರೇಽನ
ನಮ್ಮ ದೇಸದಾವ್ರು,
ಕನ್ನಡ ಮಂದಿ ಬರೋದಿಲ್ಲೇನ್ರಿ?
‘ಹೂಂ’
ದೇವ್ರ ದಿಂಡ್ರಗೆ
ಗುಡಿ ಗುಂಡಾರಕ ಹೋಗುದಿಲ್ಲೇಽನು
ಇದೇನು ಪಾರ್ಕು ಗಾರ್ಡನ್ ಅಂತ ಅಡ್ಡಾಡ್ತಿರಲ್ಲ!
ಯಕ್ಕಾಽ, ಚಮಚೆಯಿಂದನ ಊಟ ಮಾಡಿದ್ರ
ಕೈ ಇರೋದು ಯಾತಕ್ಕ”
ಎಂದು ನೂರೆಂಟು ಅಣಕು ಪ್ರಶ್ನೆ ಕೇಳಿ
“ನಮ್ಮ ಕನ್ನಡಾನ ನಮಗ ಛಲೋ ಬಿಡ್ರಿ”
ಅಂದ ಹೋದ ನಮ್ಮ
ಹೊಲದ ಬಸನಿಂಗನ ಮಾತು ಕೇಳಿ
ಯಾವುದಾದರೂ ವಾಟಾಳ್ ಪಕ್ಷನೋ
ಕನ್ನಡ ಚಳುವಳಿ, ಸಂಘರ್ಷ ಪಕ್ಷನೋ
ಸೇರಿ
‘ಕನ್ನಡಾ ಕನ್ನಡಾ’ ಅಂತ
ಚೀರಾಡು ಹಂಗಾಽತ ನನ ಮನಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವ ನೀನೈತಂದೆ
Next post ಲಿಂಗಮ್ಮನ ವಚನಗಳು – ೨೬

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…