Home / ಕವನ / ಕವಿತೆ / ಅಂತರಾಳ

ಅಂತರಾಳ

ನಾನು ಹೆಣ್ಣು ಯುಗದ ಕಣ್ಣು
ದಾತ ದಾತನ ದಾತೆಯು,
ಮುಗಿಲಿನೆದೆಗೂ ಮಿಗಿಲು ನಾನು
ವಿಶ್ವ ಸೃಷ್ಟಿಯ ತಾಯಿಯು,
ಕಡಲ ಒಡಲಿನಾಳದಾಳ ನಾನು
ಜಗದ ಜೋಗುಳ ಗೀತೆಯು |

ಉರಿಯು ತಂಪು ತಾರಾ ಮಿಣುಪು
ಸಗ್ಗ ಋತುವಿನ ಸೋನೆಯು,
ಶೃಂಗ ಶೃಂಗದ ಶೃಂಗ ನಂದನ
ಭೃಂಗದೆದೆಯ ಮಿಡಿತವು,
ದಟ್ಟ ಝರಿ ವನ ಬನ ರಾಜಿ ನಾನು
ಧಮನಿ ಧಮನಿಗೂ ರುಧಿರವು |

ಇರದ ದೇವರನಿರವ ರೂಪಿನ
ತ್ಯಾಗ ಭೋಗ ಭಾಗ್ಯದ ಭರಣಿಯು,
ಬಿತ್ತು ಬಿತ್ತಿಗೆ ರೂಪ ರೂಹನು
ತಿದ್ದಿ ತೀಡೋ ಭ್ರೂಣ ಲತಿಕೆಯು,
ಪುರುಷ ನಿನಗೆ ಪ್ರಕೃತಿ ನಾನು
ಉಳಿವು ಬೆಳೆವಿನ ನಿಯತಿಯು |

ಅಂದು ಇಂದು ಹಿಂದೆಂದಿನಿಂದೋ
ಬಂಧ ಬಂಧದ ದಿಗ್ಭಂಧನ
ಸೃಷ್ಟಿ ದಿಟ್ಟಿಯ ಪುರುಷ ನಿನ್ನಯ
ಕೈಯಲುಗಿನೆದೆಯ ಚಂದನ
ಪಡೆದ ಕೊಸರೊಲವ ಋಣಿಯು ನಾನು
ತೆರುವ ವಡ್ಡಿ ಚಕ್ರದ ದಾಳವು |

ಆವ ಮನುವಿನ ಸ್ಮೃತಿ ವಿಸ್ಮೃತಿಯೋ
ಸೆಲೆಯ ಬಲೆಯ ಜಾಲವೊ
ಆವಕ್ಕರದಕ್ಕರಕೂ ನನ್ನ ನೆತ್ತರೆ ಶಾಯಿಯು
ವ್ಯಕ್ತಾವ್ಯಕ್ತ ಭೀತಿಯ ಛಾಯೆಯು
ಬರೆದ ಬರಹದ ಹೊಗೆಯ ಹಗೆಯ ನೀನು
ನನ್ನ ಬಸಿರ ಪ್ರಸೂತನು |

ಸುರತಿ ಸುಖದಾ ಬಯಲ ಬತ್ತಲೋ
ಹುತ್ತ ಹೊಕ್ಕ ಶುಕ್ರನ ಧಾರಿಣಿ
ವಿರತಿ ಶೃತಿಗೂ ರಾಗರತಿಯನುರಾಗಿಯು
ಒಲವ ಹೂಮಳೆ ಶೃಂಗಾರಿಣಿ
ಹುಟ್ಟು ಬೆಳೆವು ಮುಳುಗಟ್ಟು ಕಟ್ಟ ಬಟ್ಟೆ ನಾನು
ಭಾವ ಶೂನ್ಯ ಜನದೆದೆ ಜಗದಲಿ |

ಯಶದ ಯಶದಾಧಾರ ಧಾರ ತೊರೆಯು
ಯಶವಂತನಾ ಬೆನ್ನ ನೆರಳಲಿ
ಶೂದ್ರಸ್ಪುಶ್ಯ ಮೋಹ ಕಾಮಿ ಮಾಯೆಯು
ಕ್ರೂರ ಪುರುಷ ಕಲ್ಪದ ಸರಳಲಿ
ರಸದ ಜನನಕೆ ವಿರಸ ಮರಣಕೆ
ಸಮರಸದ ಬದುಕಿನ ದೀಪ ಕನ್ನಿಕೆ |
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...