ಸಂಸರಣ

ವಿಶ್ವದಂಗಳ ತೃಣ-ತೃಣದ ಕಣವದು
ಜೀವ ಜಾಲದ ಬದುಕಿಗೆ
ನನಗೆ ನಿನಗೆಂದೆಣಿಸುವೇತಕೆ ಉರಿದು
ಬೀಳೋ ಅಸ್ಥಿಯ ಭ್ರಾಂತಿಗೆ |

ಎನಿತು ರೂಪರೂಪ ಭೇದವು
ಒಂದೇ ಜೀವದಿ ಸಮತೆಯು
ವಿಕಾಸ ದೃಷ್ಟಿಗೆ ಸೃಷ್ಟಿಗರ್ಭದ
ಮೂರ್ತ ಮೂರ್ತದ ದರುಶನ
ನವ್ಯ ನವಕೆ ಶುಭೋದಯವು
ನಿತ್ಯ ಸತ್ಯ ದಿನಪನ ಚೇತನ |

ಋತು ಚಕ್ರದ ಮಿಥುನ ಫಲವು
ಪ್ರಾಣ ಸ್ಪುರಣದುಗಮದಿರುವು
ನಾದ ಕ್ರತುವಿನನುಭಾವ ಸೌಧದ
ಜೀವ ದೇವ ಭಾವದ ಗೆಳೆತನ
ಬಂಧ ಬಂಧದ ಸೇತು ಬಂಧವು
ಸಂಸರಣ ಸಾರದ ನಂದನ |

ಹತನ ತನದಾ ಧೂರ್ತ ಕ್ರೌರ್ಯವು
ದಾನವನ ರಣದಾನನ
ಜತನ ಪಾವನ ಶೀಲ ತನವದೆ
ಹರಿಹರರ ಸಮತೆಯ ಚೇತನ
ಬಾಳ್ವೆ ಬಾಳ್ವೆಯ ಚೆಲ್ವ ಬಾಳ್ವೆಯು
ಸಗ್ಗ ಸಂವರಣದ ಸಾಧನ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಜಲ್
Next post ನೆನಪಿಡುವಳೆ?

ಸಣ್ಣ ಕತೆ

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…