ಪಯಣ

ಸಾಗುತಿರಲಿ ಜೀವನ ಯಾತ್ರೆ
ಎಚ್ಚರೆಚ್ಚರ ಸಿರಿ ಬೆಳಕಲಿ
ಅಲ್ಲೊ, ಇಲ್ಲೊ, ಎಲ್ಲೋ ಮುಗ್ಗರಿಸದೆ
ಮನ-‘ಮನ’ವ ಕೈಯ ಹಿಡಿಯಲಿ |

ನೀನೆ ನಿನ್ನಯ ದಾರಿ ಬೆಳಕು
ಸಾಗು ಒಳ ಬೆಳಕಿನ ಪಥದಲಿ
ನಿನ್ನರಿವೆ ತಾನದು ಹೊನ್ನ ದೀವಿಗೆ
ಮರವೆ ತಾರದೆ ಜೊತೆ ಸೇರಲಿ |

ದೇವ ದೇವರಿರವಿನರಿವಿಗೆ
ನೀನೆ ನಿನ್ನಯ ಆಲಯ
ಸಮತೆ ಸಮರಸ ಶಾಂತ ಕ್ಷಮತೆಗೆ
ನಡೆ ನುಡಿಯೇ ಶೃತಿಲಯ |

ಮೇಲು ಕೀಳಿನ ಸೋಂಕ ಕಾಣದೆ
ಸ್ವಸ್ಥವಿರಲೆದೆ ಬಾಂದಳ
ಸ್ವಾರ್ಥ, ಕ್ರೌರ್ಯ, ದ್ವೇಷದೆದೆಗೂ
ಕಣ್ಣ ತೆರೆಸಲಿ ಪ್ರೀತಿ ಜೋಗುಳ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಯ್ಕಗಳು
Next post ಮಳೆರಾಜ ಬಂದಾನು

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…