ಪಯಣ

ಸಾಗುತಿರಲಿ ಜೀವನ ಯಾತ್ರೆ
ಎಚ್ಚರೆಚ್ಚರ ಸಿರಿ ಬೆಳಕಲಿ
ಅಲ್ಲೊ, ಇಲ್ಲೊ, ಎಲ್ಲೋ ಮುಗ್ಗರಿಸದೆ
ಮನ-‘ಮನ’ವ ಕೈಯ ಹಿಡಿಯಲಿ |

ನೀನೆ ನಿನ್ನಯ ದಾರಿ ಬೆಳಕು
ಸಾಗು ಒಳ ಬೆಳಕಿನ ಪಥದಲಿ
ನಿನ್ನರಿವೆ ತಾನದು ಹೊನ್ನ ದೀವಿಗೆ
ಮರವೆ ತಾರದೆ ಜೊತೆ ಸೇರಲಿ |

ದೇವ ದೇವರಿರವಿನರಿವಿಗೆ
ನೀನೆ ನಿನ್ನಯ ಆಲಯ
ಸಮತೆ ಸಮರಸ ಶಾಂತ ಕ್ಷಮತೆಗೆ
ನಡೆ ನುಡಿಯೇ ಶೃತಿಲಯ |

ಮೇಲು ಕೀಳಿನ ಸೋಂಕ ಕಾಣದೆ
ಸ್ವಸ್ಥವಿರಲೆದೆ ಬಾಂದಳ
ಸ್ವಾರ್ಥ, ಕ್ರೌರ್ಯ, ದ್ವೇಷದೆದೆಗೂ
ಕಣ್ಣ ತೆರೆಸಲಿ ಪ್ರೀತಿ ಜೋಗುಳ |
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಾಯ್ಕಗಳು
Next post ಮಳೆರಾಜ ಬಂದಾನು

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…