ಅಮರ‘ಶಿಲ್ಪಿ’

ಸೃಜನ ಜನಕನ ಪ್ರೀತಿ ತನಯ
ಸೃಷ್ಠಿ ದೃಷ್ಠಿದಾತನ ಚಿನ್ಮಯ |

ಕಲಾ, ಕಲೆ, ಕಲಾಲಯದ ಕಾವ್ಯವೊ
ನಿನ್ನ ಕಣ್ಣ ಕೈಗಳ ಲೀಲೆಯು
ಲೋಕ ಲೋಕಕೆ ಹೇತು ಸಿಂಧುವು
ನಾಕ ಭುವನದ ಕೀರ್ತಿಯು |

ಶಿಲೆಯು, ಧಾತುವು ಸುಮವರಳಿನರಳು
ನವನೀತಗೊಳಿಸುತೆ ನೇಹದಿ
ಲಾವಣ್ಯದೆಳೆಯ ತಿರುಳ ಹೆರಳಲಿ
ಭಾವಾತೀತವಾಗುತ ಪುಣ್ಯದಿ |

ಕಲ್ಲು ಕಲ್ಲೆದೆ ಮಿಡಿಸೊ ಕರ್ತೃವೆ
ಮೂರ್ತ ಮೂರ್ತದ ಕಾರಣ
ಇತಿಹಾಸಹಾಸದ ಸಗ್ಗಲೋಕವು
ಸಾಕ್ಷಾತ್ಕಾರದೈಸಿರಿ ತೋರಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೌನದಲಿ
Next post ರಾಜ ಹಂಸಗಳು

ಸಣ್ಣ ಕತೆ

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…