ಅಮರ‘ಶಿಲ್ಪಿ’

ಸೃಜನ ಜನಕನ ಪ್ರೀತಿ ತನಯ
ಸೃಷ್ಠಿ ದೃಷ್ಠಿದಾತನ ಚಿನ್ಮಯ |

ಕಲಾ, ಕಲೆ, ಕಲಾಲಯದ ಕಾವ್ಯವೊ
ನಿನ್ನ ಕಣ್ಣ ಕೈಗಳ ಲೀಲೆಯು
ಲೋಕ ಲೋಕಕೆ ಹೇತು ಸಿಂಧುವು
ನಾಕ ಭುವನದ ಕೀರ್ತಿಯು |

ಶಿಲೆಯು, ಧಾತುವು ಸುಮವರಳಿನರಳು
ನವನೀತಗೊಳಿಸುತೆ ನೇಹದಿ
ಲಾವಣ್ಯದೆಳೆಯ ತಿರುಳ ಹೆರಳಲಿ
ಭಾವಾತೀತವಾಗುತ ಪುಣ್ಯದಿ |

ಕಲ್ಲು ಕಲ್ಲೆದೆ ಮಿಡಿಸೊ ಕರ್ತೃವೆ
ಮೂರ್ತ ಮೂರ್ತದ ಕಾರಣ
ಇತಿಹಾಸಹಾಸದ ಸಗ್ಗಲೋಕವು
ಸಾಕ್ಷಾತ್ಕಾರದೈಸಿರಿ ತೋರಣ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೌನದಲಿ
Next post ರಾಜ ಹಂಸಗಳು

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

cheap jordans|wholesale air max|wholesale jordans|wholesale jewelry|wholesale jerseys