ಎಚ್ಚರ!

ಮನಸೇ ಹಸಿರಾಗಿರು ನೀನು
ಈ ಉಸಿರು ತಾನಾಗಿ ನಿಲ್ಲುವ ತನಕ
ಉಸಿರೇ ಹೆಸರಾಗಿರು ನೀನು
ಈ ಬಸಿರ ಖಿಣವು ತಾ ತೀರುವ ತನಕ ||ಪ||

ಚೆಲುವೊ-ನಲಿವೋ ಹೃನ್ಮನದ ಒಲವೊ
ಗೆಲುವ ಛಲದ ಬಲವೊಽ
ಹೂವೊ ಹಣ್ಣೊ ತಂಬೆಲರ ಸೊಗಸೊ
ನವನವದ ನವ್ಯ ನಂದನವೊಽ
ಮನ ಮನದಿ ಮಥನ
ಸೌಗಂಧ ತನನ ನವರಾಗದಿಂಪ ಸ್ವರವೊಽ
ಜೀವ ದೇವ ಭಾವೋನ್ಮಾದದ ಮಿಲನವೊಽ
ಸೋಲುಗೆಲುವ ರಂಗ ತಂತ್ರವೊಽ ||೧||

ಕಷ್ಟ-ಕಠಿಣ ಸಂಕರದ ಜಾಲವೊ
ಹಗೆಯ ಧಗೆಯ ಸುಳಿಯೊಽ
ಬರಮೋಡದಲೆಗಳಲವತನಿಲ ಸೊಗಸೊ
ಬಿರುಬಿಸಿಲ ಮರಳರಳ ನೆಲವೊಽ
ಕಣ ಕಣದಿ ದಮನದುರಿಯೊ
ಅಣು-ಅಣುವುದಹಿಸೊ ಕಡು ತಾಪ ಕೂಪವೊಽ
ದೇಹ-ಮೋಹ ದಾಹೋನ್ಮಾದದ ತಂತ್ರವೊಽ
ಅಳಿವು-ಳಿವಿನಾ ಶೂಲ ಜಾಲವೋಽ ||೨||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯುದ್ಧ
Next post ಗೂಡಿಂದ ಗೂಡಿಗೆ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…