Home / ಕವನ / ಕವಿತೆ / ಬಯಕೆ

ಬಯಕೆ

ಬಯಕೆಯೊಂದದು
ಮನದೊಳಂದುದು
ಎನಿತೆನಿತೊ ತವಕದಿ ಮೂಡುತೆ,
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ |

ಹೊಂಬೆಳಗಲ್ಲರಳಿ, ಸೌಗಂಧ ಸೂಸಿ
ತನಿಗಾಳಿಯೋಳ್ ಬೆರೆತು ಮಕರಂದ ನೀಡೆ
ಮಣ್ಣು – ಮುಗಿಲನೆ ಕಂಡು ದಿನವೆಲ್ಲ ಘಮಘಮಿಸಿ
ನಸುನಗುವ ನಂದನದ ಹೂವಾಗೋ ಬಯಕೆ

ಬಯಕೆಯೊಂದದು
ಮನದೊಳಂದುದು
ಎನಿತೆನಿತೊ ತವಕದಿ ಮೂಡುತೆ
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ

ಬೆಟ್ಟ ಗುಡ್ಡ ಸಾಲಲಿ ಪಯಣಿಗರ ಪಥದಲಿ
ತಣ್ಣೆಳಲನಿತ್ತು, ಸವಿ ಫಲವ ನೀಡೆ
ಕಡಿದುರಿಯೊಳಿಟ್ಟರು, ಬೆಂದುದನುಂಡವರಲಿ
ಸಂತೃಪ್ತವಾಗೋ ಗಿಡ-ಮರವಾಗುವಾ ಬಯಕೆ

ಬಯಕೆಯೊಂದದು
ಮನದೊಳಂದದು
ಎನಿತೆನಿತೊ ತವಕದಿ ಮೂಡುತೆ
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ

ಗಿರಿಶೃಂಗದಿಂದಲಿ ಧುಮ್ಮಿಕ್ಕಿ ನಲಿಯುತ
ತೊರೆ ನದಿಯಾಗಿ ಸಾಗರೆಡೆಗೆ ಓಡೆ
ಹಾದಿ ಹಾದಿಯಿಕ್ಕೆಲದ ಹಸಿರ ಹೆಸರ ಕಾಣುತ
ಜೀವದೆದೆಯ ದಾಹಕೆ ಧಾರೆಯಾಗುವ ಬಯಕೆ

ಬಯಕೆಯೊಂದದು
ಮನದೊಳಂದದು
ಎನಿತೆನಿತೊ ತವಕದಿ ಮೂಡುತೆ
ಹಿತದ, ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ.

ಭುವಿ ಬಾನ ಬಿತ್ತರ ಕಡಲೈಸಿರಿಯ ಚಿತ್ತರ
ಬಯಲ ಬಯಲ ಸೀಮಾ ಸೀಮೆಗಳಾಚೆ
ದಾಟಿ ದಾಟಿದ ರೆಕ್ಕೆ-ಪುಕ್ಕ ಬಲದ ಸಿಂಗರ
ಪಾರತಂತ್ರ ತೊರೆದಾ ಹಕ್ಕಿಯಾಗುವ ಬಯಕೆ

ಬಯಕೆಯೊಂದದು
ಮನದೊಳಂದದು
ಎನಿತೆನಿತೊ ತವಕದಿ ಮೂಡುತೆ
ಹಿತದ ಹಿತಕೆ
ನಿಸ್ಪೃಹದ ನೇರಕೆ
ಇನಿಸು ತಪ್ಪದೆಡೆ ಮಾಡುತೆ

ಕಂಡ ಅಗುಳಿಗೆ ತನ್ನ ಬಳಗವ ಕೂಗಿ ಕರೆಯುವ
ಹಂಚಿಕೊಳುತ ನೇಹದ ಮಮತೆ ಮೂಡೆ
ಗೂಡ ಕಟ್ಟಿದ ಪಿಕದ ಕುಲಕೂ ಗುಟಕನೀಯುವ
ಒಲವೆದೆಯ ಗೂಡಿನ ‘ಕಾಕ’ವಾಗುವ ಬಯಕೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...